Webdunia - Bharat's app for daily news and videos

Install App

ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಕಿರಿಯರಿಗೆ ಜಿಂಬಾಬ್ವೆ ಪರೀಕ್ಷೆ ಇಂದಿನಿಂದ ಶುರು

Krishnaveni K
ಶನಿವಾರ, 6 ಜುಲೈ 2024 (10:01 IST)
ಹರಾರೆ: ಟಿ20 ವಿಶ್ವಕಪ್ ಮುಗಿದು ಭಾರತ ವಿಶ್ವಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವಾಗಲೇ ಇದೀಗ ಕಿರಿಯರ ತಂಡ ಮತ್ತೊಂದು ಟಿ20 ಸರಣಿಗೆ ಸಜ್ಜಾಗಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗುತ್ತಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾಗೆ ಶುಬ್ಮನ್ ಗಿಲ್ ನಾಯಕತ್ವ ವಹಿಸಿಕೊಂಡಿದ್ದಾರೆ. ಹಿರಿಯರಿಗೆ ಈ ಸರಣಿಗೆ ವಿಶ್ರಾಂತಿ ನೀಡಲಾಗಿದ್ದು, ಐಪಿಎಲ್ ನಲ್ಲಿ ಮಿಂಚಿದ ಕಿರಿಯರಿಗೆ ಅವಕಾಶ ನೀಡಲಾಗಿದೆ.

ಋತುರಾಜ್ ಗಾಯಕ್ ವಾಡ್, ರಿಂಕು ಸಿಂಗ್, ರಿಯಾನ್ ಪರಾಗ್, ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್ ಮುಂತಾದ ಪ್ರತಿಭೆಗಳಿಗೆ ಟಿ20 ವಿಶ್ವಕಪ್ ನಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಟೀಂ ಇಂಡಿಯಾದ ಭವಿಷ್ಯದ ತಾರೆಗಳಿಗೆ ಈಗ ಜಿಂಬಾಬ್ವೆ ಸರಣಿಯಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸುವ ಅವಕಾಶ ಸಿಕ್ಕಿದೆ.

ಭಾರತ ತಂಡಕ್ಕೆ ಈ ಸರಣಿಯಲ್ಲಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾರ್ಯನಿರ್ವಹಿಸುತ್ತಿದ್ದಾರೆ. ಶುಬ್ಮನ್ ಗಿಲ್ ಐಪಿಎಲ್ ನಲ್ಲಿ ನಾಯಕನಾಗಿ ಅಷ್ಟೊಂದು ಯಶಸ್ಸು ಪಡೆದಿರಲಿಲ್ಲ. ಈಗ ಭಾರತ ತಂಡದ ನಾಯಕರಾಗಿ ಕ್ಲಿಕ್ ಆಗುತ್ತಾರಾ ನೋಡಬೇಕಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 4.30  ಕ್ಕೆ ಆರಂಭವಾಗಲಿದೆ.
ಹರಾರೆ: ಟಿ20 ವಿಶ್ವಕಪ್ ಮುಗಿದು ಭಾರತ ವಿಶ್ವಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವಾಗಲೇ ಇದೀಗ ಕಿರಿಯರ ತಂಡ ಮತ್ತೊಂದು ಟಿ20 ಸರಣಿಗೆ ಸಜ್ಜಾಗಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗುತ್ತಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾಗೆ ಶುಬ್ಮನ್ ಗಿಲ್ ನಾಯಕತ್ವ ವಹಿಸಿಕೊಂಡಿದ್ದಾರೆ. ಹಿರಿಯರಿಗೆ ಈ ಸರಣಿಗೆ ವಿಶ್ರಾಂತಿ ನೀಡಲಾಗಿದ್ದು, ಐಪಿಎಲ್ ನಲ್ಲಿ ಮಿಂಚಿದ ಕಿರಿಯರಿಗೆ ಅವಕಾಶ ನೀಡಲಾಗಿದೆ.

ಋತುರಾಜ್ ಗಾಯಕ್ ವಾಡ್, ರಿಂಕು ಸಿಂಗ್, ರಿಯಾನ್ ಪರಾಗ್, ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್ ಮುಂತಾದ ಪ್ರತಿಭೆಗಳಿಗೆ ಟಿ20 ವಿಶ್ವಕಪ್ ನಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಟೀಂ ಇಂಡಿಯಾದ ಭವಿಷ್ಯದ ತಾರೆಗಳಿಗೆ ಈಗ ಜಿಂಬಾಬ್ವೆ ಸರಣಿಯಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸುವ ಅವಕಾಶ ಸಿಕ್ಕಿದೆ.

ಭಾರತ ತಂಡಕ್ಕೆ ಈ ಸರಣಿಯಲ್ಲಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾರ್ಯನಿರ್ವಹಿಸುತ್ತಿದ್ದಾರೆ. ಶುಬ್ಮನ್ ಗಿಲ್ ಐಪಿಎಲ್ ನಲ್ಲಿ ನಾಯಕನಾಗಿ ಅಷ್ಟೊಂದು ಯಶಸ್ಸು ಪಡೆದಿರಲಿಲ್ಲ. ಈಗ ಭಾರತ ತಂಡದ ನಾಯಕರಾಗಿ ಕ್ಲಿಕ್ ಆಗುತ್ತಾರಾ ನೋಡಬೇಕಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 4.30  ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments