ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ನಾವು ಸಿದ್ದರಾಗಿದ್ದೇವೆ. ಮೂರನೇ ಬಾರಿಯೂ ಪಂದ್ಯಾವಳಿ ಗೆಲ್ಲುವ ವಿಶ್ವಾಸವಿದೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 1ರಿಂದ 18 ರವರೆಗೆ ನಡೆಯಲಿರುವ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ಜೊತೆ ನಮ್ಮ ಮೊದಲ ಪಂದ್ಯವಿದೆ ಎಂದು ತಿಳಿಸಿದ್ದಾರೆ.
ಇತರ ತಂಡಗಳ ವಿರುದ್ಧ ಆಡುವಂತೆ ಪಾಕಿಸ್ತಾನದ ಜೊತೆಗೂ ಆಡಲಿದ್ದೇವೆ. ಅದಕ್ಕಾಗಿ ವಿಶೇಷ ತರಬೇತಿ, ಅಭ್ಯಾಸ ಅಥವಾ ರಣತಂತ್ರ ರೂಪಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಭಾರತ ಎರಡು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಮೂರನೇ ಬಾರಿ ಗೆಲ್ಲಲು ಪ್ರಯತ್ನಿಸುತ್ತೇವೆ. ತಂಡದ ಎಲ್ಲಾ ಆಟಗಾರರು ಫಾರ್ಮ್ನಲ್ಲಿದ್ದಾರೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.