ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

Krishnaveni K
ಶುಕ್ರವಾರ, 24 ಅಕ್ಟೋಬರ್ 2025 (10:13 IST)
Photo Credit: X
ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಕಳೆದುಕೊಂಡ ಬೆನ್ನಲ್ಲೇ ಟೀಂ ಇಂಡಿಯಾ ಅಭಿಮಾನಿಗಳ ಆಕ್ರೋಶ ಮೇರೆ ಮೀರಿದೆ. ಮೊದಲು ಗೌತಮ್ ಗಂಭೀರ್ ಮತ್ತು ಅಜಿತ್ ಅಗರ್ಕರ್ ರನ್ನು ಕಿತ್ತು ಹಾಕಬೇಕು ಆಗ ತಂಡ ಉದ್ದಾರವಾಗುತ್ತದೆ ಎಂದು ಕಿಡಿ ಕಾರಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಮೇಲೆ ಅಭಿಮಾನಿಗಳ ಭಾರೀ ನಿರೀಕ್ಷೆಯಿತ್ತು. ಆದರೆ ಮೂರು ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಈಗಾಗಲೇ ಸರಣಿ ಕಳೆದುಕೊಂಡಿರುವ ಭಾರತಕ್ಕೆ ಕೊನೆಯ ಪಂದ್ಯ ವೈಟ್ ವಾಶ್ ತಪ್ಪಿಸಿಕೊಳ್ಳಲು ಇರುವ ಹೋರಾಟವಾಗಲಿದೆ.

ಈ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮೇಲೆ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ತಲೆಬುಡವಿಲ್ಲದ ಲೆಕ್ಕಾಚಾರ, ತಂಡದ ಆಯ್ಕೆ, ಪ್ರಮುಖ ಆಟಗಾರರ ಅವಗಣನೆಯೇ ಈ ಪರಿಸ್ಥಿತಿಗೆ ಕಾರಣ ಎಂದಿದ್ದಾರೆ.

ಬಿಳಿ ಚೆಂಡಿನಲ್ಲಿ ಅತ್ಯುತ್ತಮ ನಾಯಕನನ್ನು ಕಿತ್ತು ಹಾಕಲಾಗಿದೆ, ದೇಶದಲ್ಲಿ ಅತ್ಯುತ್ತಮ ಕೋಚ್ ಗಳಿದ್ದರೂ ಅರ್ಹತೆಯಿಲ್ಲದವರನ್ನು ಕೋಚ್ ಮಾಡಲಾಗಿದೆ, ಅತ್ಯುತ್ತಮ ಆಲ್ ರೌಂಡರ್ ಗಳಿದ್ದರೂ ಅವರನ್ನು ಹೊರಗಿರಿಸಲಾಗಿದೆ, ಅತ್ಯುತ್ತಮ ಸ್ಪಿನ್ನರ್ ಗೂ ಅವಕಾಶ ನೀಡುತ್ತಿಲ್ಲ. ಇದೇ ಕಾರಣಕ್ಕೆ ಲಬುಶೇನ್, ಪ್ಯಾಟ್ ಕುಮಿನ್ಸ್, ಮ್ಯಾಕ್ಸ್ ವೆಲ್ ನಂತಹ ದಾಂಡಿಗರಿಲ್ಲದಿದ್ದರೂ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲಾಗುತ್ತಿಲ್ಲ. ಇದಕ್ಕೆಲ್ಲಾ ಗಂಭೀರ್ ಮತ್ತು ಅಗರ್ಕರ್ ಪ್ರತಿಷ್ಠೆ, ಪಕ್ಷಪಾತ ಧೋರಣೆಗಳೇ ಕಾರಣ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments