Webdunia - Bharat's app for daily news and videos

Install App

ಗೌತಮ್ ಗಂಭೀರ್ ಕೋಚ್ ಆಗಿರುವುದರಿಂದ ಆರ್ ಸಿಬಿಯ ಈ ಆಟಗಾರನಿಗೆ ಒಲಿಯಲಿದೆ ಅದೃಷ್ಟ

Krishnaveni K
ಗುರುವಾರ, 11 ಜುಲೈ 2024 (08:45 IST)
ಮುಂಬೈ: ಟೀಂ ಇಂಡಿಯಾ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಗಂಭೀರ್ ಕೋಚ್ ಆದ ಮೇಲೆ ಕೆಲವು ಆಟಗಾರರು ತಮಗೆ ಟೀಂ ಇಂಡಿಯಾದಲ್ಲಿ ಅವಕಾಶದ ಬಾಗಿಲು ತೆರೆಯಬಹುದು ಎಂಬ ವಿಶ್ವಾಸದಲ್ಲಿದ್ದಾರೆ. ಅವರ ಪೈಕಿ ಆರ್ ಸಿಬಿಯ ಈ ಆಟಗಾರನೂ ಒಬ್ಬರು.

ಆರ್ ಸಿಬಿ ಪರ ಕಳೆದ ಐಪಿಎಲ್ ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ರಜತ್ ಪಾಟೀದಾರ್ ಮೇಲೆ ಗಂಭೀರ್ ಈ ಹಿಂದೆಯೇ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಪಾಟೀದಾರ್ ಅವರಂತಹವರಿಗೆ ರಾಷ್ಟ್ರೀಯ ತಂಡದಲ್ಲಿ ಹೆಚ್ಚಿನ ಅವಕಾಶ ಸಿಗಬೇಕು ಎಂದಿದ್ದರು. ಹೀಗಾಗಿ ಪಾಟೀದಾರ್ ಕಿರು ಮಾದರಿಯಲ್ಲೂ ಭಾರತ ತಂಡಕ್ಕೆ ಆಯ್ಕೆಯಾಗುವ ಕನಸಿನಲ್ಲಿದ್ದಾರೆ.

ಕಳೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಜತ್ ಪಾಟೀದಾರ್ ಗೆ ಅವಕಾಶ ಸಿಕ್ಕಿತ್ತು. ಸತತವಾಗಿ ಮೂರು ಪಂದ್ಯಗಳಲ್ಲಿ ಅವಕಾಶ ಸಿಕ್ಕಿಯೂ ಅವರ ಕೊಡುಗೆ ಶೂನ್ಯವಾಗಿತ್ತು. ಹೀಗಾಗಿ ತಂಡದಿಂದ ಕಿತ್ತು ಹಾಕಲಾಗಿತ್ತು. ಹೀಗಾಗಿ ತಂಡದಲ್ಲಿ ಅವಕಾಶದ ಬಾಗಿಲು ಬಂದ್ ಆಗಿದೆ ಎಂಬ ನಿರಾಸೆಯಲ್ಲಿರುವಾಗ ಗಂಭೀರ್ ಕೋಚ್ ಆಗಿರುವುದು ಅವರ ಪಾಲಿಗೆ ಭರವಸೆಯಾಗಿದೆ.

ಇವರಲ್ಲದೆ, ತಂಡದಿಂದ ಕಡೆಗಣಿಸಲ್ಪಟ್ಟಿರುವ ಶ್ರೇಯಸ್ ಅಯ್ಯರ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್ ಮೊದಲಾದ ಆಟಗಾರರೊಂದಿಗೆ ಈಗಾಗಲೇ ಕೆಲಸ ಮಾಡಿರುವ ಗಂಭೀರ್ ಈ ಪ್ರತಿಭಾವಂತರನ್ನು ಮುಂದೆ ಭಾರತ ತಂಡದ ಖಾಯಂ ಸದಸ್ಯರಾಗಿ ಮಾಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments