Webdunia - Bharat's app for daily news and videos

Install App

ಟೀಂ ಇಂಡಿಯಾ ಸೋಲಿಗೆ ಮೂರು ಪ್ರಮುಖ ಕಾರಣಗಳು

Webdunia
ಗುರುವಾರ, 23 ಮಾರ್ಚ್ 2023 (08:30 IST)
ಚೆನ್ನೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 21 ರನ್ ಗಳ ಸೋಲು ಅನುಭವಿಸಿತು. ಈ ಸರಣಿಯನ್ನೂ ಆಸೀಸ್ ಕೈ ವಶ ಮಾಡಿಕೊಂಡಿದೆ.

ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಲು ಮೂರು ಪ್ರಮುಖ ಕಾರಣಗಳಿವೆ. ಈ ಸೋಲಿಗೆ ಮೂರು ಪ್ರಮುಖ ಕಾರಣಗಳಿವೆ.

ಮೊದಲನೆಯದಾಗಿ ಕೆಎಲ್ ರಾಹುಲ್-ವಿರಾಟ್ ಕೊಹ್ಲಿ ಉತ್ತಮವಾಗಿ ಆಡುತ್ತಿದ್ದರು. ರಾಹುಲ್ ಔಟಾದ ಬಳಿಕವೂ ವಿರಾಟ್ ಕೊಹ್ಲಿ ಹಾರ್ದಿಕ್ ಪಾಂಡ್ಯ ಜೊತೆಗೂಡಿ ಪಂದ್ಯ ಮುಗಿಸಬಹುದಿತ್ತು. ಅರ್ಧಶತಕ ಗಳಿಸಿ ಉತ್ತಮ ಲಯದಲ್ಲಿ ಕೊಹ್ಲಿ ಅನಗತ್ಯವಾಗಿ ಎತ್ತಿ ಹೊಡೆಯಲು ಹೋಗಿ ಔಟಾದರು. ಇದರಿಂದ ಪಂದ್ಯದ ದಿಕ್ಕು ಬದಲಾಯಿತು.

ಸೂರ್ಯಕುಮಾರ್ ಯಾದವ್ ರನ್ನು ರಕ್ಷಿಸಲು ಅಕ್ಸರ್ ಪಟೇಲ್ ರನ್ನು ಮುಂಬಡ್ತಿ ನೀಡಿ ಬ್ಯಾಟಿಂಗ್ ಗೆ ಕಳುಹಿಸಲಾಯಿತು. ಅಕ್ಸರ್ ಕೊನೆಯಲ್ಲಿ ಎಂದಿನಂತೆ ಬಂದಿದ್ದರೆ ಬಹುಶಃ ಹಾರ್ದಿಕ್ ಗೆ ಸಾಥ್ ನೀಡುತ್ತಿದ್ದರು. ಇನ್ನು ಸತತ ಎರಡು ಗೋಲ್ಡನ್ ಡಕ್ ಗೊಳಗಾಗಿದ್ದ ಸೂರ್ಯಕುಮಾರ್ ಯಾದವ್ ಗೆ ಮೂರನೇ ಅವಕಾಶ ನೀಡುವ ಬದಲು ಸಂಜು ಸ್ಯಾಮ್ಸನ್ ರನ್ನು ಕಣಕ್ಕಿಳಿಸಬಹುದಿತ್ತು. ಆದರೆ ಟೀಂ ಇಂಡಿಯಾ ಮತ್ತೆ ಸೂರ್ಯಕುಮಾರ್ ಗೆ ಜೋತುಬಿದ್ದಿತು. ಆಡಂ ಜಂಪಾ, ಅಶ್ತಾನ್ ಅಗರ್ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು. ಟೀಂ ಇಂಡಿಯಾ ಸೋತಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments