ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ನಡುವಿನ ವೈಮನಸ್ಯಕ್ಕೆ ಸಾಕ್ಷಿಯಾದ ಟ್ವೀಟ್

Krishnaveni K
ಶುಕ್ರವಾರ, 13 ಸೆಪ್ಟಂಬರ್ 2024 (09:18 IST)
ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ಸಹ ಆಟಗಾರರಾದ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ನಡುವೆ ವೈಮನಸ್ಯವಿದೆ ಎಂಬ ಅನುಮಾನ ಈಗ ಅಭಿಮಾನಿಗಳಿಗೆ ಮೂಡಿದೆ. ಇದಕ್ಕೆ ಕಾರಣ ಸೂರ್ಯಕುಮಾರ್ ಟ್ವೀಟ್.

ದುಲೀಪ್ ಟ್ರೋಫಿಯಲ್ಲಿ ಮುಂಬೈನ ಶಂಸ್ ಮುಲಾನಿ ಮತ್ತು ತನುಷ್ ಕೋಟ್ಯಾನ್ ಅರ್ಧಶತಕ ಸಿಡಿಸಿದ್ದಕ್ಕೆ ಸೂರ್ಯಕುಮಾರ್ ಯಾದವ್ ಟ್ವೀಟ್ ಮಾಡಿ ಅಭಿನಂದಿಸಿದ್ದರು. ಮುಂಬೈ ಮತ್ತು ಇದೀಗ ಇಂಡಿಯಾ ಸಂಕಷ್ಟದಲ್ಲಿದ್ದಾಗ ಕಾಪಾಡುವವರು ನೀವು. ಈ ಪಯಣವನ್ನು ಎಂಜಾಯ್ ಮಾಡಿ ಎಂದು ಸೂರ್ಯಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಇಂದು ಮುಂಬೈ ಇಂಡಿಯನ್ಸ್ ತಂಡದ ಇಶಾನ್ ಕಿಶನ್ ಶತಕ ಸಿಡಿಸಿ ಮಿಂಚಿದ್ದರು. ಆದರೆ ತಮ್ಮ ಮುಂಬೈ ಇಂಡಿಯನ್ಸ್ ತಂಡದ ಸಹ ಆಟಗಾರನ ಇನಿಂಗ್ಸ್ ಬಗ್ಗೆ ಇಶಾನ್ ಒಂದೇ ಒಂದು ಮಾತು ಹೇಳದೇ ಇರುವುದು ನೆಟ್ಟಿಗರ ಅಚ್ಚರಿಗೆ ಕಾರಣವಾಗಿದೆ. ಇಶಾನ್ ಕಿಶನ್ ಗೆ ಯಾಕೆ ಅಭಿನಂದಿಸಿಲ್ಲ. ಅವರು ಮುಂಬೈ ತಂಡದಲ್ಲಿ ಇರೋದು ಅಲ್ವಾ ಎಂದು ಟಾಂಗ್ ಕೊಟ್ಟಿದ್ದಾರೆ.

ಈ ಹಿಂದೆ ಸೂರ್ಯಕುಮಾರ್ ಯಾದವ್ ಕ್ಯಾಪ್ಟನ್ ಆಗಿ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ವೇಳೆಯೇ ಇಶಾನ್ ಕಿಶನ್ ಅಸಮಾಧಾನಗೊಂಡಿದ್ದು. ಹೀಗಾಗಿ ಇಬ್ಬರ ನಡುವೆ ಅಂದಿನಿಂದಲೇ ವೈಮನಸ್ಯ ಶುರುವಾಗಿತ್ತಾ ಎಂಬ ಅನುಮಾನವೂ ಈಗ ಅಭಿಮಾನಿಗಳಿಗೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments