Webdunia - Bharat's app for daily news and videos

Install App

ಮಾರಿಗುಡಿಯಲ್ಲಿ ಮಾಡಿದ್ದ ಪ್ರಾರ್ಥನೆ ಫಲಿಸಿತು, ಸೂರ್ಯಕುಮಾರ್ ಯಾದವ್ ಗೆ ಸಿಕ್ತು ಕ್ಯಾಪ್ಟನ್ಸಿ

Krishnaveni K
ಬುಧವಾರ, 17 ಜುಲೈ 2024 (12:25 IST)
ಮುಂಬೈ: ಇತ್ತೀಚೆಗೆ ಉಡುಪಿಯ ಮಾರಿಗುಡಿಗೆ ಭೇಟಿ ನೀಡಿದ್ದ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಗೆ ಮಾಡಿದ್ದ ಪ್ರಾರ್ಥನೆ ಕೊನೆಗೂ ಫಲಿಸಿತು. ಇದೀಗ ಸೂರ್ಯ ಟೀಂ ಇಂಡಿಯಾಗೆ ಟಿ20 ಮಾದರಿಯಲ್ಲಿ ನಾಯಕರಾಗುವುದು ಬಹುತೇಕ ಖಚಿತವಾಗಿದೆ.

ಟಿ20 ವಿಶ್ವಕಪ್ ಬಳಿಕ ಕ್ಯಾಪ್ಟನ್ ರೋಹಿತ್ ಶರ್ಮಾ ಕಿರು ಮಾದರಿಯಿಂದ ನಿವೃತ್ತಿ ಪ್ರಕಟಿಸಿದರು. ಹೀಗಾಗಿ ತಂಡಕ್ಕೆ ಈಗ ದೀರ್ಘ ಅವಧಿಗೆ ಟಿ20 ಮಾದರಿಯಲ್ಲಿ ಹೊಸ ನಾಯಕನ ಅಗತ್ಯವಿದೆ. ಆ ಸ್ಥಾನವನ್ನು ಹಾರ್ದಿಕ್ ಪಾಂಡ್ಯಗೆ ನೀಡಬಹುದು ಎಂದೇ ಎಲ್ಲರ ಊಹೆಯಾಗಿತ್ತು. ಯಾಕೆಂದರೆ ಪಾಂಡ್ಯ ಉಪನಾಯಕರಾಗಿದ್ದರು. ಅಲ್ಲದೆ, ಈಗಾಗಲೇ ಹಲವು ಬಾರಿ ಟೀಂ ಇಂಡಿಯಾವನ್ನು ಟಿ20 ಮಾದರಿಯಲ್ಲಿ ಮುನ್ನಡೆಸಿ ಯಶಸ್ಸು ಪಡೆದಿದ್ದರು.

ಆದರೆ ಗೌತಮ್ ಗಂಭೀರ್ ಕೋಚ್ ಆಗಿ ತಂಡಕ್ಕೆ ಬರುತ್ತಿದ್ದಂತೇ ದಿಡೀರ್ ಎಲ್ಲವೂ ಬದಲಾಗಿದೆ. ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಜೊತೆ ಇತ್ತೀಚೆಗೆ ಮಾತುಕತೆ ನಡೆಸಿದ್ದ ಗಂಭೀರ್ ಮುಂದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಸೂರ್ಯಗೆ ನಾಯಕತ್ವ ನೀಡಲು ಸೂಚನೆ ನೀಡಿದ್ದರು. ಅದರಂತೆ ಈಗ 30 ಹಾರ್ದಿಕ್ ಗೆ ಕೊನೆಯ ಕ್ಷಣದಲ್ಲಿ ಶಾಕ್ ಸಿಕ್ಕಿದ್ದು, 33 ವರ್ಷದ ಸೂರ್ಯಗೆ ನಾಯಕತ್ವ ಸಿಗುತ್ತಿದೆ.

ಇತ್ತೀಚೆಗೆ ಮಾರಿಗುಡಿಗೆ ಭೇಟಿ ನೀಡಿದ್ದ ವೇಳೆ ಅರ್ಚಕರು ಪ್ರಾರ್ಥನೆ ಮಾಡುವಾಗ ಮುಂದೊಂದು ದಿನ ಭಾರತ ತಂಡದ ನಾಯಕರಾಗಲು ದೇವಿ ನಿಮಗೆ ಆಶೀರ್ವಾದ ಮಾಡಲಿ ಎಂದು ಹರಸಿದ್ದರು. ಆ ಪ್ರಾರ್ಥನೆ ಈಗ ಫಲಿಸಿದ್ದು, ಸೂರ್ಯ ಟಿ20 ಮಾದರಿಗೆ ಭಾರತ ತಂಡದ ನಾಯಕರಾಗುವುದು ಬಹುತೇಕ ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments