Select Your Language

Notifications

webdunia
webdunia
webdunia
webdunia

ಜಿಂಬಾಬ್ವೆ ಏಕದಿನ ಸರಣಿಗೆ ಶ್ರೀಲಂಕಾ ತಂಡಕ್ಕೆ ಉಪುಲ್ ತರಂಗಾ ನಾಯಕತ್ವ

ಜಿಂಬಾಬ್ವೆ ಏಕದಿನ ಸರಣಿಗೆ ಶ್ರೀಲಂಕಾ ತಂಡಕ್ಕೆ ಉಪುಲ್ ತರಂಗಾ ನಾಯಕತ್ವ
Colombo , ಸೋಮವಾರ, 7 ನವೆಂಬರ್ 2016 (11:52 IST)
ಕೊಲಂಬೋ: ಜಿಂಬಾಬ್ವೆಯಲ್ಲಿ ನಡೆಯಲಿರುವ ತ್ರಿಕೋನ ಏಕದಿನ ಸರಣಿಗೆ ಶ್ರೀಲಂಕಾ ತಂಡವನ್ನು ಉಪುಲ್ ತರಂಗಾ ಮುನ್ನಡೆಸಲಿದ್ದಾರೆ.

ಮುಂದಿನ ವಾರದಿಂದ ತ್ರಿಕೋನ ಏಕದಿನ ಸರಣಿ ಆರಂಭವಾಗಲಿದೆ. ಖಾಯಂ ನಾಯಕ ಏಂಜಲೋ ಮ್ಯಾಥ್ಯೂಸ್ ಮತ್ತು ಉಪ ನಾಯಕ ದಿನೇಶ್ ಚಂಡಿಮಾಲ್ ಇಬ್ಬರೂ ಗಾಯಾಳುಗಳಾಗಿರುವುದು ಲಂಕಾ ತಂಡಕ್ಕೆ ತಲೆ ನೋವಾಗಿದೆ.

ಇವರಿಬ್ಬರ ಅನುಪಸ್ಥಿತಿಯಲ್ಲಿ ಟೆಸ್ಟ್ ಸರಣಿಯಲ್ಲಿ ಹಿರಿಯ ರಂಗನಾ ಹೆರಾತ್ ತಂಡದ ಚುಕ್ಕಾಣಿ ಹಿಡಿದಿದ್ದರು. ಟೆಸ್ಟ್ ತಂಡದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿರುವ ತರಂಗಾ ಅವರನ್ನು ಏಕದಿನ ತಂಡಕ್ಕೆ ನಾಯಕರಾಗಿ ಆಯ್ಕೆ ಮಾಡಲಾಗಿದೆ.

ಸದ್ಯ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಅಸೇಲ ಗುಣರತ್ನೆ ಮತ್ತು ಲಹಿರು ಕುಮಾರ ಅವರನ್ನು ಏಕದಿನ ಸರಣಿಗೂ ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ಮಹಿಳಾ ಹಾಕಿ ತಂಡ