Webdunia - Bharat's app for daily news and videos

Install App

ವಿಜಯ್ ಹಜಾರೆ ಟ್ರೋಫಿ: ದಾಖಲೆ ಮೊತ್ತ ಕಲೆ ಹಾಕಿ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ

Webdunia
ಗುರುವಾರ, 23 ನವೆಂಬರ್ 2023 (16:34 IST)
Photo Courtesy: Twitter
ಅಹಮ್ಮದಾಬಾದ್: ವಿಜಯ್ ಹಜಾರೆ ಟ್ರೋಫಿಯಲ್ಲಿ ಮಯಾಂಕ್ ಅಗರ್ವಾಲ್, ಸಮರ್ಥ್, ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ಕರ್ನಾಟಕ ತಂಡ ಜಮ್ಮು ಕಾಶ್ಮೀರ ವಿರುದ್ಧ ಭರ್ಜರಿ 222 ರನ್ ಗಳಿಂದ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 50 ಓವರ್ ಗಳಲ್ಲಿ 402 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು. ಅದೂ ಕೇವಲ 2 ವಿಕೆಟ್ ಕಳೆದುಕೊಂಡು! ದೇಶೀಯ ಕ್ರಿಕೆಟ್ ನಲ್ಲಿ ಇದು ಕರ್ನಾಟಕದ ಗರಿಷ್ಠ ಮೊತ್ತವಾಗಿದೆ. ಈ ಮೊತ್ತ ಬೆನ್ನತ್ತಿದ ಜಮ್ಮು 30.4 ಓವರ್ ಗಳಲ್ಲಿ 180 ರನ್ ಗಳಿಗೆ ಆಲೌಟ್ ಆಯಿತು.

ಕರ್ನಾಟಕದ ಪರ ಭರ್ಜರಿ ಶತಕ ಸಿಡಿಸಿದ ನಾಯಕ ಮಯಾಂಕ್ ಅಗರ್ವಾಲ್ 133 ಎಸೆತಗಳಿಂದ 157 ರನ್ ಸಿಡಿಸಿದರು. ಅವರಿಗೆ ತಕ್ಕ ಸಾಥ್ ನೀಡಿದ ಸಮರ್ಥ್ 120 ಎಸೆತಗಳಿಂದ 123 ರನ್ ಗಳಿಸಿದರು. ಆದರೆ ಕೊನೆಯಲ್ಲಿ ಮಿಂಚಿದ್ದು ದೇವದತ್ತ ಪಡಿಕ್ಕಲ್. ಕೇವಲ 35 ಎಸೆತಗಳಿಂದ 5 ಸಿಕ್ಸರ್ ಸಹಿತ ಅಜೇಯ 71 ರನ್ ಚಚ್ಚಿದ ಬ್ಯಾಟಿಗ ತಂಡದ ಮೊತ್ತ 400 ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ಈ ಮೊತ್ತ ಬೆನ್ನತ್ತಿದ ಜಮ್ಮು ಪರ ಯದುವೀರ ಸಿಂಗ್ ಚರಕ್ 64, ವಿವ್ರಾಂತ್ ಶರ್ಮ 41, ಶುಭಂ ಖಜುರಿಯಾ 29 ರನ್ ಗಳಿಸಿದರು. ಕರ್ನಾಟಕ ಪರ ಬೌಲಿಂಗ್ ನಲ್ಲಿ ಮಿಂಚಿದ ವಿಜಯಕುಮಾರ್ ವೈಶಾಖ್ 4 ವಿಕೆಟ್ ಕಬಳಿಸಿ ಮಿಂಚಿದರು. ಉಳಿದಂತೆ ಕೆ.ಗೌತಮ್ 2, ಜಗದೀಶ್ ಸುಚಿತ್, ವಿದ್ವತ್ ಕಾವೇರಪ್ಪ, ವಾಸುಕಿ ಕೌಶಿಕ್ ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments