Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Krishnaveni K
ಶನಿವಾರ, 7 ಜೂನ್ 2025 (10:01 IST)
ಬೆಂಗಳೂರು: ನಾನೇನಾದರೂ ಈಗಲೂ ಆರ್ ಸಿಬಿ ಮಾಲಿಕನಾಗಿದ್ದಿದ್ದರೆ ಕೆಎಲ್ ರಾಹುಲ್ ಬಗ್ಗೆ ಏನು ನಿರ್ಧಾರ ತೆಗೆದುಕೊಳ್ತಿದ್ದೆ ಎಂದು ವಿಜಯ್ ಮಲ್ಯ ನೀಡಿರುವ ಹೇಳಿಕೆ ಈಗ ವೈರಲ್ ಆಗಿದೆ.

ಕೆಎಲ್ ರಾಹುಲ್ ಆರ್ ಸಿಬಿ ತಂಡಕ್ಕೆ ಬರಬೇಕು ಎಂಬುದು ಅಭಿಮಾನಿಗಳ ಬಯಕೆಯಾಗಿತ್ತು. ಆದರೆ ಕಳೆದ ಬಾರಿ ಬಿಡ್ಡಿಂಗ್ ನಲ್ಲಿ ಆರ್ ಸಿಬಿ ಕೆಎಲ್ ರಾಹುಲ್ ರನ್ನು ಕೊಳ್ಳಲಿಲ್ಲ. ಬಿಡ್ಡಿಂಗ್ ಮಾಡಿದರೂ ಕೊನೆಯಲ್ಲಿ ಕೈ ಬಿಟ್ಟಿತ್ತು. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯಿತು.

ನಮ್ಮವರೇ ಆದ ಕನ್ನಡಿಗ ಆಟಗಾರನನ್ನು ಆರ್ ಸಿಬಿ ಕಡೆಗಣಿಸುತ್ತಿದೆ ಎಂದು ಕನ್ನಡಿಗರಲ್ಲೂ ಅಸಮಾಧಾನವಿದೆ. ಇದೀಗ ಕೆಎಲ್ ರಾಹುಲ್ ಬಗ್ಗೆ ವಿಜಯ್ ಮಲ್ಯ ಸ್ಪೋಟಕ ಹೇಳಿದ್ದಾರೆ. ಪಾಡ್ ಕಾಸ್ಟ್ ಒಂದರಲ್ಲಿ ಮಾತನಾಡಿರುವ ವಿಜಯ್ ಮಲ್ಯ ಹಲವು ವಿಚಾರಗಳನ್ನು ಹೇಳಿದ್ದಾರೆ.

ಈ ವೇಳೆ ಕೆಎಲ್ ರಾಹುಲ್ ಬಗ್ಗೆಯೂ ಮಾತನಾಡಿದ್ದಾರೆ. ನಾನೇನಾದರೂ ಈಗಲೂ ಆರ್ ಸಿಬಿ ಮಾಲಿಕನಾಗಿದ್ದರೆ ಖಂಡಿತಾ ಕೆಎಲ್ ರಾಹುಲ್ ರನ್ನು ಬಿಡ್ಡಿಂಗ್ ನಲ್ಲಿ ಬಿಟ್ಟುಕೊಡ್ತಾ ಇರಲಿಲ್ಲ. ಆರ್ ಸಿಬಿ ತಂಡದಲ್ಲೇ ಉಳಿಸಿಕೊಳ್ಳುತ್ತಿದ್ದೆ ಎಂದಿದ್ದಾರೆ. ದೇಶದ ಈ ನಾಲ್ಕು ಆಟಗಾರರನ್ನು ಆರ್ ಸಿಬಿಗೆ ಖರೀದಿ ಮಾಡ್ತಿದ್ದೆ. ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ ಮತ್ತು ರಿಷಭ್ ಪಂತ್ ರನ್ನು ಆರ್ ಸಿಬಿಗೆ ಆಯ್ಕೆ ಮಾಡುತ್ತಿದ್ದೆ ಎಂದಿದ್ದಾರೆ. ಅವರ ಹೇಳಿಕೆ ಈಗ ವೈರಲ್ ಆಗಿದೆ.

ಈ ಹಿಂದೆ ಅನಿಲ್ ಕುಂಬ್ಳೆಯನ್ನೂ ಅವರು ತಂಡದಿಂದ ಕೈ ಬಿಡಲು ಒಪ್ಪಿರಲಿಲ್ಲ. ಅವರು ನಮ್ಮ ಹುಡುಗ, ಅವರನ್ನು ಕೈ ಬಿಡಬೇಡಿ ಎಂದು ಹೇಳಿದ್ದರಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments