Webdunia - Bharat's app for daily news and videos

Install App

ವಿಜಯ್ ಹಜಾರೆ ಟ್ರೋಫಿ: ಚಾಂಪಿಯನ್ ಆದ ಕರ್ನಾಟಕ ತಂಡ

Webdunia
ಶುಕ್ರವಾರ, 25 ಅಕ್ಟೋಬರ್ 2019 (17:08 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ತಮಿಳುನಾಡು ವಿರುದ್ಧ 60 ರನ್ ಗಳ ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.


ಮಳೆಯಿಂದಾಗಿ ಆಟ ಪೂರ್ತಿ ನಡೆಯಲಿಲ್ಲ. ಹೀಗಾಗಿ ವಿಜೆಡಿ ನಿಯಮ(ಡಕ್ ವರ್ತ್ ಲೂಯಿಸ್ ನಿಯಮಕ್ಕೆ ಸಮಾನವಾಗಿ ದೇಶೀಯವಾಗಿ ಬಳಸುವ ನಿಯಮ)ದ ಪ್ರಕಾರ ಫಲಿತಾಂಶ ನಿರ್ಧರಿಸಲಾಯಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ತಮಿಳುನಾಡು 49.5 ಓವರ್ ಆಡಿ 252 ರನ್ ಗಳಿಗೆ ಆಲೌಟ್ ಆಗಿತ್ತು. ಇದಾದ ಬಳಿಕ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ 23 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 146 ರನ್ ಗಳಿಸುವಷ್ಟರಲ್ಲಿ ಮಳೆಯ ಆಗಮನವಾಯಿತು. ಈ ವೇಳೆ ಕೆಎಲ್ ರಾಹುಲ್ 52 ಮತ್ತು ಮಯಾಂಕ್ ಅಗರ್ವಾಲ್ 69 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದರು. ಬಳಿಕ ಮಳೆ ನಿಲ್ಲುವ ಸೂಚನೆ ಕಾಣದ ಕಾರಣ ವಿಜೆಡಿ ನಿಯಮದ ಅನುಸಾರ ವಿಜೇತರನ್ನು ನಿರ್ಧರಿಸಲಾಯಿತು. ಈ ಮೂಲಕ ಕರ್ನಾಟಕ ನಾಲ್ಕನೇ ಬಾರಿಗೆ ವಿಜಯ್ ಹಜಾರೆ ಟ್ರೋಫಿ ಚಾಂಪಿಯನ್ ಆದಂತಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments