Webdunia - Bharat's app for daily news and videos

Install App

ಆಸೀಸ್ ಹಣಿಯಲು ಹೊರಟ ಕೊಹ್ಲಿಗೆ ಆಟಗಾರರದ್ದೇ ಚಿಂತೆ!

Webdunia
ಭಾನುವಾರ, 17 ಸೆಪ್ಟಂಬರ್ 2017 (08:46 IST)
ಚೆನ್ನೈ: ಭಾರತ ಮತ್ತೊಂದು ಸರಣಿಗೆ ಸಜ್ಜಾಗಿದೆ. ಈ ಬಾರಿ ಪ್ರಬಲ ಆಸ್ಟ್ರೇಲಿಯಾ ಜತೆಗೆ. ಆದರೆ ವಿರಾಟ್ ಕೊಹ್ಲಿಗೆ ತಮ್ಮ ತಂಡದ ಆಟಗಾರರಲ್ಲಿ ಯಾರನ್ನು ಆರಿಸುವುದು, ಯಾರನ್ನು ಬಿಡುವುದು ಎಂಬುದೇ ಚಿಂತೆಯಾಗಿದೆ.

 
ಕೊಹ್ಲಿ ತಂಡದಲ್ಲಿ ಈಗ ಎಲ್ಲರೂ ಪ್ರತಿಭಾವಂತರೇ.. ಎಲ್ಲರೂ ಫಾರ್ಮ್ ನಲ್ಲಿರುವವರೇ. ಆದರೆ ಯಾರನ್ನು ತಂಡಕ್ಕೆ ಆರಿಸುವುದು, ಯಾವ ಸ್ಥಾನದಲ್ಲಿ ಆಡಿಸುವುದು ಎಂಬುದೇ ದೊಡ್ಡ ತಲೆನೋವಾಗಿದೆ.

ಶಿಖರ್ ಧವನ್ ತಂಡದಿಂದ ಹೊರಗುಳಿದಿರುವುದರಿಂದ ಅಜಿಂಕ್ಯಾ ರೆಹಾನೆಗೆ ಆಡುವ ಅವಕಾಶ ದೊರಕಲಿದೆ. ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ಕೊಹ್ಲಿ ಚಿಂತನೆ ನಡೆಸಿದ್ದಾರೆ. ಆದರೆ ಕೆಎಲ್ ರಾಹುಲ್ ಮತ್ತೆ ಮಧ್ಯಮ ಕ್ರಮಾಂಕಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗುತ್ತದೆ.

ಹಾಗಾದರೆ ಮತ್ತೊಂದು ಕ್ರಮಾಂಕಕ್ಕೆ ಮನೀಶ್ ಮತ್ತು ಕೇದಾರ್ ಜಾದವ್ ನಡುವೆ ಪೈಪೋಟಿ ನಡೆಯಲಿದೆ ಎನ್ನುವುದು ಕೊಹ್ಲಿ ಅಭಿಪ್ರಾಯ. ರಾಹುಲ್ ಕೊಂಚ ಮಂಕಾಗಿದ್ದರೂ, ಸೂಕ್ತ ಸಮಯದಲ್ಲಿ ಫಾರ್ಮ್ ಗೆ ಮರಳುತ್ತಾರೆ ಎಂಬ ವಿಶ್ವಾಸದಲ್ಲಿ ನಾಯಕ ಕೊಹ್ಲಿ ಇದ್ದಾರೆ. 

ಆದರೆ ಯಾರೂ ತಮಗೆ ಇಂತಹದ್ದೇ ಕ್ರಮಾಂಕ ಬೇಕೆಂದು ಪಟ್ಟು ಹಿಡಿದು ಕೂರಲಾಗದು. ಹಾಗೆ ಪಟ್ಟು ಹಿಡಿದರೆ ತಂಡದ ಸಮತೋಲನ ತಪ್ಪಬಹುದು ಎಂಬ ಭೀತಿ ಕೊಹ್ಲಿಗಿದೆ. ಹಾಗಾಗಿ ಸಿಕ್ಕಿದ ಸ್ಥಾನದಲ್ಲಿ ಚೆನ್ನಾಗಿ ಆಡಿ ತಂಡಕ್ಕೆ ಸಮತೋಲನ ನೀಡಿ ಎಂದು ಕೊಹ್ಲಿ ತಮ್ಮ ಆಟಗಾರರಿಗೆ ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ.. ಸೆಹ್ವಾಗ್ ಗೆ ಹೆಸರು ಬದಲಾಯಿಸಿಕೊಳ್ಳುವ ಆಸೆಯಂತೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments