Webdunia - Bharat's app for daily news and videos

Install App

ತೀವ್ರ ಚರ್ಚೆಗೆ ಕಾರಣವಾದ ವಿರಾಟ್ ಕೊಹ್ಲಿ ನಿರ್ಧಾರ

Webdunia
ಗುರುವಾರ, 2 ಆಗಸ್ಟ್ 2018 (09:20 IST)
ಎಡ್ಜ್ ಬಾಸ್ಟನ್: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನೇ ಹೊರಗಿಟ್ಟ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಿರ್ಧಾರ ತೀವ್ರ ಚರ್ಚೆಗೊಳಗಾಗಿದೆ.

ಮೂರನೇ ಕ್ರಮಾಂಕದಲ್ಲಿ ಅದ್ಭುತವಾಗಿ ಆಡುವ ಪೂಜಾರ ಟೆಸ್ಟ್ ಕ್ರಿಕೆಟ್ ಗೆ ಹೇಳಿ ಮಾಡಿಸಿದ ಆಟಗಾರ. ತುಂಬಾ ತಾಳ್ಮೆಯಿರುವ ಈ ಆಟಗಾರ ತುಂಬಾ ಹೊತ್ತು ಕ್ರೀಸ್ ‍ನಲ್ಲಿದ್ದು ಬೌಲರ್ ಗಳನ್ನು ಸತಾಯಿಸುತ್ತಾರೆ.

ಆದರೆ ತಮ್ಮ ನೆಚ್ಚಿನ ಶಿಖರ್ ಧವನ್ ಗೆ ಸ್ಥಾನ ಕೊಡಿಸಲು ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ಗೆ ಮೂರನೇ ಕ್ರಮಾಂಕ ನೀಡಿ ಪೂಜಾರರನ್ನು ತಂಡದಿಂದ ಹೊರಗಿಟ್ಟಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಫಾರ್ಮ್ ನಲ್ಲಿಲ್ಲದ ಧವನ್ ಗಾಗಿ ಟೆಸ್ಟ್ ಗೆ ಹೇಳಿ ಮಾಡಿಸಿದ ಪೂಜಾರರನ್ನು ಹೊರಗಿಟ್ಟಿದ್ದು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲೂ ತೀವ್ರ ಚರ್ಚೆಗೆ ಗುರಿಯಾಗಿದೆ. ಇದರ ಜತೆಗೆ ಏಕೈಕ ಸ್ಪಿನ್ನರ್ ನೊಂದಿಗೆ ಕಣಕ್ಕಿಳಿದ ಕೊಹ್ಲಿ ನಿರ್ಧಾರವನ್ನೂ ಅಭಿಮಾನಿಗಳು ಟೀಕಿಸುತ್ತಿದ್ದಾರೆ. ಅವರ ಟೀಕೆಗೆ ತಕ್ಕಂತೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇದುವರೆಗೆ ಇಂಗ್ಲೆಂಡ್ ನ ನಾಲ್ಕು ವಿಕೆಟ್ ಕಿತ್ತು ಗಾಯದ ಮೇಲೆ ತುಪ್ಪ ಸುರಿದಿದ್ದಾರೆ.

ವೇಗಿಗಳಿಗಿಂತ ಸ್ಪಿನ್ನರ್ ಗಳೇ ಮೇಲುಗೈ ಸಾಧಿಸುತ್ತಿರುವಾಗ  ಮೂವರು ಸ್ಪೆಷಲಿಸ್ಟ್ ವೇಗಿಗಳ ಬದಲು ಇಬ್ಬರು ಸ್ಪಿನ್ನರ್ ಗಳನ್ನು ಆಡಿಸಿದ್ದರೆ ಭಾರತಕ್ಕೆ ಮೇಲುಗೈ ಸಾಧಿಸಲು ಇನ್ನೂ ಅವಕಾಶವಿತ್ತು ಎಂದು ಅಭಿಮಾನಿಗಳು ವಾಗ್ದಾಳಿ ನಡೆಸುತ್ತಿದ್ದಾರೆ. ಕೊಹ್ಲಿಯ ಈ ನಿರ್ಧಾರ ಎಷ್ಟು ಸರಿ ಎಂಬುದು ಭಾರತದ ಬ್ಯಾಟಿಂಗ್ ಸಂದರ್ಭ ಗೊತ್ತಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments