Select Your Language

Notifications

webdunia
webdunia
webdunia
webdunia

ಕರುಣ್ ನಾಯರ್ ಕೈ ಬಿಟ್ಟಿದ್ದರ ಬಗ್ಗೆ ವಿರಾಟ್ ಕೊಹ್ಲಿ ಖಡಕ್ ಆಗಿ ಹೇಳಿದ್ದೇನು?

ಕರುಣ್ ನಾಯರ್
ಮುಂಬೈ , ಗುರುವಾರ, 4 ಅಕ್ಟೋಬರ್ 2018 (08:43 IST)
ಮುಂಬೈ: ಟೀಂ ಇಂಡಿಯಾದಲ್ಲಿ ಆಡುವ ಬಳಗದಲ್ಲಿ ಅವಕಾಶ ನೀಡದೇ ಕರುಣ್ ನಾಯರ್ ರನ್ನು ವೆಸ್ಟ್ ಇಂಡೀಸ್ ಸರಣಿಯಿಂದ ಕೊಕ್ ನೀಡಿರುವುದರ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ದಾಖಲೆ ಹೊಂದಿರುವ ಕರುಣ್ ನಾಯರ್ ಗೆ ಇಂಗ್ಲೆಂಡ್ ನಲ್ಲಿ ಒಂದೇ ಒಂದು ಅವಕಾಶ ನೀಡದೆಯೂ ವಿಂಡೀಸ್ ಸರಣಿಗೆ ಆಯ್ಕೆ ಮಾಡದಿರುವುದರ ಬಗ್ಗೆ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

‘ಈ ಬಗ್ಗೆ ಈಗಾಗಲೇ ಆಯ್ಕೆಗಾರರು ಸ್ಪಷ್ಟನೆ ನೀಡಿದ್ದಾರೆ. ನಾನು ಇದರ ಬಗ್ಗೆ ಮಾತನಾಡಲು ಅರ್ಹ ವ್ಯಕ್ತಿಯಲ್ಲ. ಯಾಕೆಂದರೆ ಆಟಗಾರರ ಆಯ್ಕೆ ನನ್ನ ಕೆಲಸವಲ್ಲ. ಮುಖ್ಯ ಆಯ್ಕೆಗಾರರು ಈ ಬಗ್ಗೆ ಅಭಿಪ್ರಾಯ ಹೇಳಿದ ಮೇಲೆ ನಾನು ಈ ವಿಚಾರದ ಬಗ್ಗೆ ಮಾತನಾಡುವುದು ಸರಿಯಲ್ಲ. ಎಲ್ಲರಿಗೂ ಅವರವರ ಕೆಲಸದ ಅರಿವಿದ್ದರೆ ಸಾಕು. ಆಯ್ಕೆ ಮಾಡುವುದು ನನ್ನ ಕೆಲಸವಲ್ಲ. ತಂಡವಾಗಿ ಚೆನ್ನಾಗಿ ಆಡುವುದಷ್ಟೇ ನಮ್ಮ ಕೆಲಸ’ ಎಂದು ಕೊಹ್ಲಿ ಖಡಕ್ ಆಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯಾ ಕಪ್ ಸೋತ ಆಕ್ರೋಶದಲ್ಲಿ ವಿರಾಟ್ ಕೊಹ್ಲಿ ವೆಬ್ ಸೈಟ್ ಹ್ಯಾಕ್ ಮಾಡಿದ ಬಾಂಗ್ಲಾ ಅಭಿಮಾನಿಗಳು!