Webdunia - Bharat's app for daily news and videos

Install App

ಕರುಣ್ ನಾಯರ್ ಕೈ ಬಿಟ್ಟಿದ್ದರ ಬಗ್ಗೆ ವಿರಾಟ್ ಕೊಹ್ಲಿ ಖಡಕ್ ಆಗಿ ಹೇಳಿದ್ದೇನು?

Webdunia
ಗುರುವಾರ, 4 ಅಕ್ಟೋಬರ್ 2018 (08:43 IST)
ಮುಂಬೈ: ಟೀಂ ಇಂಡಿಯಾದಲ್ಲಿ ಆಡುವ ಬಳಗದಲ್ಲಿ ಅವಕಾಶ ನೀಡದೇ ಕರುಣ್ ನಾಯರ್ ರನ್ನು ವೆಸ್ಟ್ ಇಂಡೀಸ್ ಸರಣಿಯಿಂದ ಕೊಕ್ ನೀಡಿರುವುದರ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ದಾಖಲೆ ಹೊಂದಿರುವ ಕರುಣ್ ನಾಯರ್ ಗೆ ಇಂಗ್ಲೆಂಡ್ ನಲ್ಲಿ ಒಂದೇ ಒಂದು ಅವಕಾಶ ನೀಡದೆಯೂ ವಿಂಡೀಸ್ ಸರಣಿಗೆ ಆಯ್ಕೆ ಮಾಡದಿರುವುದರ ಬಗ್ಗೆ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

‘ಈ ಬಗ್ಗೆ ಈಗಾಗಲೇ ಆಯ್ಕೆಗಾರರು ಸ್ಪಷ್ಟನೆ ನೀಡಿದ್ದಾರೆ. ನಾನು ಇದರ ಬಗ್ಗೆ ಮಾತನಾಡಲು ಅರ್ಹ ವ್ಯಕ್ತಿಯಲ್ಲ. ಯಾಕೆಂದರೆ ಆಟಗಾರರ ಆಯ್ಕೆ ನನ್ನ ಕೆಲಸವಲ್ಲ. ಮುಖ್ಯ ಆಯ್ಕೆಗಾರರು ಈ ಬಗ್ಗೆ ಅಭಿಪ್ರಾಯ ಹೇಳಿದ ಮೇಲೆ ನಾನು ಈ ವಿಚಾರದ ಬಗ್ಗೆ ಮಾತನಾಡುವುದು ಸರಿಯಲ್ಲ. ಎಲ್ಲರಿಗೂ ಅವರವರ ಕೆಲಸದ ಅರಿವಿದ್ದರೆ ಸಾಕು. ಆಯ್ಕೆ ಮಾಡುವುದು ನನ್ನ ಕೆಲಸವಲ್ಲ. ತಂಡವಾಗಿ ಚೆನ್ನಾಗಿ ಆಡುವುದಷ್ಟೇ ನಮ್ಮ ಕೆಲಸ’ ಎಂದು ಕೊಹ್ಲಿ ಖಡಕ್ ಆಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments