ಮೂರನೇ ಟೆಸ್ಟ್ ಏನಾದ್ರೂ ಸೋತರೆ ರವಿಶಾಸ್ತ್ರಿ, ಕೊಹ್ಲಿ ಕತೆ ಅಷ್ಟೇ..!!

Webdunia
ಗುರುವಾರ, 20 ಡಿಸೆಂಬರ್ 2018 (09:37 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿ ಈಗಾಗಲೇ 1-1 ರಿಂದ ಸಮಬಲಗೊಂಡಿದೆ. ಭಾರತ ಕಳೆದ ಪಂದ್ಯವನ್ನು ಸ್ವಯಂಕೃತ ಅಪರಾಧಗಳಿಂದಾಗಿ ಸೋತ ಮೇಲೆ ನಾಯಕ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಮೇಲೆ ಆಕ್ರೋಶ ಹೆಚ್ಚಾಗಿದೆ.


ಕಳೆದ ಪಂದ್ಯದಲ್ಲಿ ಒಬ್ಬರೇ ಒಬ್ಬ ಸ್ಪಿನ್ ಬೌಲರ್ ಗಳನ್ನು ಇಟ್ಟುಕೊಳ್ಳದೇ ಆಡಿ ಮುಖಭಂಗ ಅನುಭವಿಸಿದ್ದ ನಾಯಕ ಕೊಹ್ಲಿ ಮತ್ತು ಕೋಚ್ ಶಾಸ್ತ್ರಿ ನಡೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇಂತಹ ಪ್ರಮಾದಗಳನ್ನು ಎಸಗಿಕೊಂಡು ಮುಂದಿನ ಟೆಸ್ಟ್ ಸೋತರೆ ಇಬ್ಬರ ರೋಲ್ ಬಗ್ಗೆ ಪುನರ್ ವಿಮರ್ಶೆ ನಡೆಸಬೇಕಾದ ಅಗತ್ಯವಿದೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಖಾರವಾಗಿ ನುಡಿದಿದ್ದಾರೆ.

‘ದ.ಆಫ್ರಿಕಾ ಸರಣಿಯಿಂದಲೂ ಇವರಿಬ್ಬರ ಆಯ್ಕೆ ಪ್ರಮಾದಗಳನ್ನು ನೋಡುತ್ತಲೇ ಇದ್ದೇವೆ. ಮತ್ತೆ ಇಂತಹ ತಪ್ಪು ಮಾಡಿ ಮುಂದಿನ ಟೆಸ್ಟ್ ಸೋತರೆ ಇಬ್ಬರಿಂದಲೂ ವಿವರಣೆ ಪಡೆಯಬೇಕು. ಸರಿಯಾಗಿ ತಂಡದ ಆಯ್ಕೆ ಮಾಡಿರುತ್ತಿದ್ದರೆ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲಬಹುದಾಗಿತ್ತು. ಆದರೆ ಇವರಿಬ್ಬರ ತಲೆಬುಡವಿಲ್ಲದ ಆಯ್ಕೆಯಿಂದಾಗಿ ಪ್ರಮಾದವಾಗಿದೆ’ ಎಂದು ಗವಾಸ್ಕರ್ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

ಮುಂದಿನ ಸುದ್ದಿ
Show comments