Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಮನವಿ ಮಾಡಿದರೂ ಹೇಳಿದ್ದು ಕೇಳಲ್ಲ ಎಂದ ಅಭಿಮಾನಿಗಳು

Krishnaveni K
ಬುಧವಾರ, 20 ಮಾರ್ಚ್ 2024 (09:13 IST)
ಬೆಂಗಳೂರು: ಆರ್ ಸಿಬಿ ಅನ್ ಬಾಕ್ಸ್ ಕಾರ್ಯಕ್ರಮದಲ್ಲಿ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಒಂದು ವಿಶೇಷ ಮನವಿ ಮಾಡಿದ್ದಾರೆ. ಆದರೂ ಅಭಿಮಾನಿಗಳು ಮಾತ್ರ ನಾವು ನಿಮ್ಮ ಮಾತು ಕೇಳಲ್ಲ ಎಂದಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್ ಸಿಬಿ ಅನ್ ಬಾಕ್ಸ್ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ಭಾಗಿಯಾಗಿದ್ದಾರೆ. ಈ ವೇಳೆ ತಂಡದ ಹೊಸ ಜೆರ್ಸಿ ಅನಾವರಣವೂ ನಡೆದಿದೆ. ಕೊಹ್ಲಿ ಮೈದಾನದಲ್ಲಿದ್ದ ವೇದಿಕೆಗೆ ಬರುತ್ತಿದ್ದಂತೇ ಪ್ರೇಕ್ಷಕರು ಜೋರಾಗಿ ಕೂಗಿ ತಮ್ಮ ಖುಷಿ ವ್ಯಕ್ತಪಡಿಸಿದರು.

ನಿರೂಪಕರೂ ಕೊಹ್ಲಿಯನ್ನು ಕಿಂಗ್ ಎಂದು ಕರೆದರು. ಆದರೆ ಇದರಿಂದ ಕೊಹ್ಲಿ ಮುಜುಗರಗೊಂಡರು. ‘ದಯವಿಟ್ಟು ನನ್ನನ್ನು ಕಿಂಗ್ ಎನ್ನಬೇಡಿ. ನನಗೆ ಮುಜುಗರವಾಗುತ್ತದೆ. ವಿರಾಟ್ ಎನ್ನಿ ಸಾಕು’ ಎಂದಿದ್ದಾರೆ. ಆದರೆ ಕೊಹ್ಲಿ ಮಾತು ಕೇಳಿದ ಅಭಿಮಾನಿಗಳು ನಾವು ನಿಮ್ಮ ಮಾತು ಕೇಳಲ್ಲ ಎಂದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಕೊಹ್ಲಿ ಮನವಿಗೆ ಪ್ರತಿಕ್ರಿಯಿಸಿರುವ ಅಭಿಮಾನಿಗಳು ನಮಗೆ ನೀವು ಎಂದೆಂದಿಗೂ ಕಿಂಗ್. ನೀವು ಏನೇ ಹೇಳಿದರೂ ನಿಮ್ಮನ್ನು ಕಿಂಗ್ ಎನ್ನುವುದನ್ನು ನಾವು ಬಿಡಲ್ಲ ಎಂದಿದ್ದಾರೆ. ಆರ್ ಸಿಬಿ ಜೆರ್ಸಿ ಅನಾವರಣ ವೇದಿಕೆಯಲ್ಲಿ ಆರ್ ಸಿಬಿ ನಾಯಕ ಫಾ ಡು ಪ್ಲೆಸಿಸ್, ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ, ಆರ್ ಸಿಬಿ ಮಾಲಿಕರು ಕೂಡಾ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments