Webdunia - Bharat's app for daily news and videos

Install App

ಕಾಟಾಚಾರಕ್ಕಷ್ಟೇ ರಣಜಿ ಆಡಿದ್ರಾ ಕೊಹ್ಲಿ, ರೋಹಿತ್ ಸೇರಿದಂತೆ ಬಿಗ್ ಸ್ಟಾರ್ ಗಳು

Krishnaveni K
ಭಾನುವಾರ, 2 ಫೆಬ್ರವರಿ 2025 (12:23 IST)
ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗರು ಈ ಬಾರಿ ರಣಜಿ ಆಡಿ ಎಲ್ಲರ ಗಮನಸೆಳೆದಿದ್ದರು. ಆದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಸ್ಟಾರ್ ಗಳು ಕಾಟಾಚಾರಕ್ಕೆ ರಣಜಿ ಆಡಿದ್ರಾ ಎನ್ನುವ ಅನುಮಾನ ಕಾಡಿದೆ.

ಟೀಂ ಇಂಡಿಯಾದಲ್ಲಿ ಫಾರ್ಮ್ ಕೊರತೆಯಿಂದ ತೀವ್ರ ಟೀಕೆಗೊಳಗಾಗಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಈ ಬಾರಿ ರಣಜಿ ಆಡಿದ್ದರು. ಇದಕ್ಕೆ ಬಿಸಿಸಿಐ ಮತ್ತು ಕೋಚ್ ಗೌತಮ್ ಗಂಭೀರ್ ಖಡಕ್ ನಿಯಮ ಕಾರಣ. ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲು ಹಿರಿಯ ಆಟಗಾರರೂ ದೇಶೀಯ ಕ್ರಿಕೆಟ್ ಆಡಲೇಬೇಕು ಎಂದು ಷರತ್ತು ಹಾಕಲಾಗಿತ್ತು.

ಈ ಕಾರಣಕ್ಕೆ ರೋಹಿತ್ ಶರ್ಮಾ ಮುಂಬೈ ಪರ, ಕೊಹ್ಲಿ ದೆಹಲಿ ಪರ ರಣಜಿ ಟ್ರೋಫಿ ಆಡಿದ್ದರು. ಆದರೆ ಇಬ್ಬರೂ ಇದನ್ನು ಗಂಭೀರವಾಗಿ ಪರಿಗಣಿಸಿದಂತೆಯೇ ಇಲ್ಲ. ಯಾವುದೋ ಪ್ರದರ್ಶನ ಪಂದ್ಯಕ್ಕೆ ಬಂದವರಂತೆ ಕಾಟಾಚಾರಕ್ಕೆ ಆಡಿ ಹೋದರು ಎನ್ನಬಹುದು.

ರೋಹಿತ್ ಶರ್ಮಾ ಮತ್ತು ಕೊಹ್ಲಿ ಇಬ್ಬರೂ ರಣಜಿ ಟ್ರೋಫಿಯಲ್ಲೂ ವಿಫಲರಾಗಿದ್ದರು. ರೋಹಿತ್ ಎರಡು ಇನಿಂಗ್ಸ್ ನಲ್ಲೂ ಬ್ಯಾಟಿಂಗ್ ಮಾಡಿದ್ದರೆ ಕೊಹ್ಲಿಗೆ ಒಂದೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಗೆ ಅವಕಾಶ ಸಿಕ್ಕಿತ್ತು. ವಿಶೇಷವಾಗಿ ಕೊಹ್ಲಿ ಆಟದ ಕಡೆ ಗಮನಹರಿಸುವುದಕ್ಕಿಂತ ಅಭಿಮಾನಿಗಳ ಕ್ರೇಜ್ ನಿಂದ ರಣಜಿ ಪಂದ್ಯಕ್ಕೆ ಸ್ವಲ್ಪ ಜನಪ್ರಿಯತೆ ಗಿಟ್ಟಿಸಿದ್ದಷ್ಟೇ ಬಂತು. ಇದರ ಹೊರತಾಗಿ ಈ ಸ್ಟಾರ್ ಗಳಿಗೆ ಈ ರಣಜಿ ಪಂದ್ಯ ಯಾವುದೇ ಪರಿಣಾಮ ಬೀರಿಲ್ಲ. ಇಂಥಾ ಚಂದಕ್ಕೆ ರಣಜಿ ಆಡುವ ತೋರಿಕೆ ಯಾಕೆ ಬೇಕಿತ್ತು ಎಂದು ಹಲವರು ಟೀಕೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments