Select Your Language

Notifications

webdunia
webdunia
webdunia
webdunia

ಆರ್ ಸಿಬಿ ಅಭಿಮಾನಿಗಳ ಕ್ಷಮೆ ಕೇಳಿದ ವಿರಾಟ್ ಕೊಹ್ಲಿ

ಆರ್ ಸಿಬಿ ಅಭಿಮಾನಿಗಳ ಕ್ಷಮೆ ಕೇಳಿದ ವಿರಾಟ್ ಕೊಹ್ಲಿ
ಮುಂಬೈ , ಶುಕ್ರವಾರ, 25 ಮೇ 2018 (08:41 IST)
ಮುಂಬೈ: ಈ ಆವೃತ್ತಿಯಲ್ಲಿ ಕಪ್ ನಮ್ದೇ ಎಂದು ಆರಂಭದಲ್ಲೇ ಜಾಹೀರಾತು ನೀಡುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೇವಲ ಜಾಹೀರಾತಿಗಷ್ಟೇ ಸೀಮಿತವಾಯಿತು. ಪ್ರದರ್ಶನ ನೀರಸವಾಗಿಯೇ ಇತ್ತು.

ಇದರಿಂದಾಗಿ ಪ್ಲೇ ಆಫ್ ಗೆ ಏರದೇ ಆರ್ ಸಿಬಿ ಐಪಿಎಲ್ ಕೂಟದಿಂದ ನಿರ್ಗಮಿಸಿ ಅಭಿಮಾನಿಗಳಿಗೆ ನಿರಾಶೆಯುಂಟುಮಾಡಿದೆ. ಹೀಗಾಗಿ ಇದೀಗ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.

ಟ್ವಿಟರ್ ನಲ್ಲಿ ವಿಡಿಯೋ ಸಂದೇಶ ನೀಡಿದ ವಿರಾಟ್ ಕೊಹ್ಲಿ ಅಭಿಮಾನಿಗಳಲ್ಲಿ ‘ಸಾರಿ’ ಎಂದಿದ್ದಾರೆ. ಅಷ್ಟೇ ಅಲ್ಲ ಮುಂದಿನ ಕೂಟದಲ್ಲಿ ತಿರುಗಿ ಬೀಳುತ್ತೇವೆ. ಸುಧಾರಿತ ಪ್ರದರ್ಶನ ನೀಡುತ್ತೇವೆ ಎಂದು ಕೊಹ್ಲಿ ಭರವಸೆ ನೀಡಿದ್ದಾರೆ. ಈ ಐಪಿಎಲ್ ನಲ್ಲಿ ಆಡಿದ 14 ಪಂದ್ಯಗಳಲ್ಲಿ ಆರ್ ಸಿಬಿ 6 ಗೆಲುವು ಮತ್ತು 8 ಸೋಲುಗಳೊಂದಿಗೆ ಕೇವಲ 12 ಅಂಕ ಗಳಿಸಲಷ್ಟೇ ಶಕ್ತವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೌಂಟಿ ಕ್ರಿಕೆಟ್ ಗೆ ಪದಾರ್ಪಣೆ ಮಾಡುವ ಮೊದಲೇ ವಿರಾಟ್ ಕೊಹ್ಲಿಗೆ ಶಾಕ್