Select Your Language

Notifications

webdunia
webdunia
webdunia
webdunia

ಸೋಲಿನ ಬಳಿಕ ಕೊಹ್ಲಿ ನೀಡಿದ ಹೇಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ!

ಸೋಲಿನ ಬಳಿಕ ಕೊಹ್ಲಿ ನೀಡಿದ ಹೇಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ!
ಸೌಥಾಂಪ್ಟನ್ , ಗುರುವಾರ, 24 ಜೂನ್ 2021 (15:20 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆದ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಸೋತ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನೀಡಿದ ಹೇಳಿಕೆ ಎಲ್ಲರೂ ಹುಬ್ಬೇರಿಸುವಂತಾಗಿದೆ.


ಸೋಲಿನ ಬಳಿಕ ಮಾತನಾಡಿರುವ ಅವರು ಕೆಲವು ಆಟಗಾರರ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ. ನಮಗೆ ಸರಿಯಾದ ಮನಸ್ಥಿತಿಯಿರುವ ಆಟಗಾರರ ಅಗತ್ಯವಿದೆ ಎಂದು ಕೊಹ್ಲಿ ಹೇಳಿರುವುದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.

ಬಿಳಿ ಚೆಂಡಿನ ಆಟದಲ್ಲಿ ಎಂತಹ ಕಠಿಣ ಪರಿಸ್ಥಿತಿಯಲ್ಲೂ ತಂಡಕ್ಕೆ ನೆರವಾಗಬಲ್ಲ ಆಟಗಾರರು ಬೇಕು. ಅದೇ ರೀತಿ ಟೆಸ್ಟ್ ಕ್ರಿಕೆಟ್ ನಲ್ಲೂ ಕಠಿಣ ಪರಿಸ್ಥಿತಿಯಲ್ಲಿ ತಂಡಕ್ಕೆ ದೃಢವಾಗಿ ನಿಂತು ಆಸರೆಯಾಗುವ ಆಟಗಾರರು ಬೇಕು. ಹೀಗಾಗಿ ಸೂಕ್ತ ಮನಸ್ಥಿತಿಯುಳ್ಳ ಆಟಗಾರರನ್ನು ಆಯ್ಕೆ ಮಾಡಬೇಕು ಎಂದಿದ್ದಾರೆ. ಈ ಮೂಲಕ ಕಳಪೆ ಫಾರ್ಮ್ ನಲ್ಲಿರುವ ಬ್ಯಾಟ್ಸ್ ಮನ್ ಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಳೆಯಿಂದಾಗಿ ಟೀಂ ಇಂಡಿಯಾಕ್ಕೆ ಅನ್ಯಾಯವಾದ ಐಸಿಸಿ ಕೂಟದ ಫೈನಲ್ಸ್ ಪಂದ್ಯಗಳು