Webdunia - Bharat's app for daily news and videos

Install App

ಸೋತ ಮೇಲೂ ಬುದ್ಧಿ ಕಲಿಯದ ವಿರಾಟ್ ಕೊಹ್ಲಿ

Webdunia
ಬುಧವಾರ, 18 ಜುಲೈ 2018 (10:00 IST)
ಲೀಡ್ಸ್: ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಮೇಲೂ ಬುದ್ಧಿ ಕಲಿಯದ ನಾಯಕ ವಿರಾಟ್ ಕೊಹ್ಲಿ ತಮ್ಮ ನಿರ್ಧಾರಗಳನ್ನು ತಾವೇ ಹೊಗಳಿಕೊಂಡಿದ್ದಾರೆ.
 

ಅಂತಿಮ ಪಂದ್ಯ ನಿರ್ಣಾಯಕವಾಗಿದ್ದರೂ ಇನ್ನಿಲ್ಲದ ಪ್ರಯೋಗ ಮಾಡಿ ಕೊಹ್ಲಿ ಕೈ ಸುಟ್ಟುಕೊಂಡರು. ಹಾಗಿದ್ದರೂ ತಮ್ಮ ಬಿಂಕ ಬಿಡದ ಕೊಹ್ಲಿ ತಾವು ಮಾಡಿದ್ದೇ ಸರಿ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೆಎಲ್ ರಾಹುಲ್ ರನ್ನು ಕೈ ಬಿಟ್ಟು ದಿನೇಶ್ ಕಾರ್ತಿಕ್ ರನ್ನು ಆಡಿಸಿದ್ದು, ಉಮೇಶ್ ಯಾದವ್ ಬದಲು ಶ್ರಾದ್ಧೂಲ್ ಠಾಕೂರ್ ಗೆ ಸ್ಥಾನ ನೀಡಿದ್ದು ವಿಶ್ವಕಪ್ ದೃಷ್ಟಿಯಿಂದ. ಸೋತಿದ್ದಕ್ಕೇ ಇದೆಲ್ಲಾ ಟೀಕೆಗೊಳಗಾಗುತ್ತಿದೆ. ಗೆದ್ದಿದ್ದರೆ ತನ್ನ ನಿರ್ಧಾರವನ್ನು ಯಾರೂ ಪ್ರಶ್ನಿಸುತ್ತಿರಲಿಲ್ಲ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

‘ದಿನೇಶ್ ಚೆನ್ನಾಗಿ ಆಡುತ್ತಾರೆಂದು ನಾವು ಯೋಚಿಸಿದೆವು. ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ನನಗೆ ಪಶ್ಚಾತ್ತಾಪವಿಲ್ಲ. ಶ್ರಾದ್ಧೂಲ್ ಗೂ ಸ್ವಲ್ಪ ಅನುಭವ ಸಿಗಲಿ ಎಂದು ಅವಕಾಶ ಕೊಟ್ಟೆವು. ವಿಶ್ವಕಪ್ ದೃಷ್ಟಿಯಿಂದ ಇದು ಅಗತ್ಯವಾಗಿತ್ತು’ ಎಂದು ಕೊಹ್ಲಿ ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments