Webdunia - Bharat's app for daily news and videos

Install App

ಗೆದ್ದ ಟೀಂ ಇಂಡಿಯಾಗೆ ಅವಮಾನ: ಪ್ರಶಸ್ತಿ ಸಮಾರಂಭದಲ್ಲಿ ಕೊಹ್ಲಿ ಅಸಮಾಧಾನ

Webdunia
ಸೋಮವಾರ, 29 ಮಾರ್ಚ್ 2021 (09:13 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯನ್ನು ಗೆದ್ದ ಟೀಂ ಇಂಡಿಯಾಗೆ ತಕ್ಕ ಪುರಸ್ಕಾರ ಸಿಗದೇ ಇರುವುದು ನಾಯಕ ವಿರಾಟ್ ಕೊಹ್ಲಿಯ ಅಸಮಾಧಾನಕ್ಕೆ ಕಾರಣವಾಗಿದೆ.
Photo Courtesy: Google


ಸಾಮಾನ್ಯವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ, ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ತಂಡದ ಪಾಲಾಗುತ್ತದೆ. ಆದರೆ ಈ ಸರಣಿಯಲ್ಲಿ ಎರಡೂ ಪ್ರಶಸ್ತಿಗಳನ್ನೂ ಭಾರತ ತಂಡದಲ್ಲಿ ಅರ್ಹರಿದ್ದರೂ ಎದುರಾಳಿ ತಂಡಕ್ಕೆ ನೀಡಲಾಗಿದೆ. ನಿನ್ನೆಯ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿ ಇಂಗ್ಲೆಂಡ್ ನ ಸ್ಯಾಮ್ ಕ್ಯುರೇನ್ ಗೆ ನೀಡಲಾಗಿದ್ದರೆ, ಈ ಸರಣಿಯ ಶ್ರೇಷ್ಠ ಆಟಗಾರ ಪ್ರಶಸ್ತಿ ಇಂಗ್ಲೆಂಡ್ ತಂಡದ ಜಾನಿ ಬೇರ್ ಸ್ಟೋಗೆ ನೀಡಲಾಗಿದೆ. ಇದು ಕೊಹ್ಲಿ ಅಸಮಾಧಾನಕ್ಕೆ ಗುರಿಯಾಗಿದೆ.

ಪ್ರಶಸ್ತಿ ಸಮಾರಂಭದಲ್ಲಿ ಕೊಹ್ಲಿ ಈ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ‘ಶ್ರಾದ್ಧೂಲ್ ಗೆ ಪಂದ್ಯ ಶ್ರೇಷ್ಠ ಮತ್ತು ಈ ಸರಣಿಯುದ್ದಕ್ಕೂ ಕಡಿಮೆ ಎಕಾನಮಿ ರೇಟ್ ನಲ್ಲಿ ಬೌಲಿಂಗ್ ಮಾಡಿ ವಿಕೆಟ್ ಕಿತ್ತ ಭುವನೇಶ್ವರ್ ಕುಮಾರ್ ಗೆ ಸರಣಿ ಶ್ರೇಷ್ಠ ಪ್ರಶಸ್ತಿ ಕೊಡದೇ ಇರುವುದು ನನಗೆ ಅಚ್ಚರಿಯಾಗಿದೆ’ ಎಂದು ಕಿಡಿ ಕಾರಿದ್ದಾರೆ. ಶ್ರಾದ್ಧೂಲ್ ನಿನ್ನೆಯ ಪಂದ್ಯದಲ್ಲಿ ಇಂಗ್ಲೆಂಡ್ ನ ಪ್ರಮುಖ ನಾಲ್ಕು ವಿಕೆಟ್ ಕಬಳಿಸಿದ್ದಲ್ಲದೆ, ಬ್ಯಾಟಿಂಗ್ ನಲ್ಲೂ 21 ಎಸೆತಗಳಲ್ಲಿ 30 ರನ್ ಗಳಿಸಿ ಭಾರತದ ಮೊತ್ತ 300 ರ ಗಡಿ ದಾಟಲು ಕಾರಣರಾಗಿದ್ದರು. ಗೆದ್ದ ತಂಡದ ಸಾಧಕರನ್ನು ಕಡೆಗಣಿಸಿ ಸೋತ ತಂಡಕ್ಕೆ ಸನ್ಮಾನ ಮಾಡಿರುವುದು ಕೊಹ್ಲಿ ಮಾತ್ರವಲ್ಲದೆ, ಭಾರತೀಯ ಕ್ರಿಕೆಟ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

ಮುಂದಿನ ಸುದ್ದಿ
Show comments