Webdunia - Bharat's app for daily news and videos

Install App

ಗೆದ್ದ ಟೀಂ ಇಂಡಿಯಾಗೆ ಅವಮಾನ: ಪ್ರಶಸ್ತಿ ಸಮಾರಂಭದಲ್ಲಿ ಕೊಹ್ಲಿ ಅಸಮಾಧಾನ

Webdunia
ಸೋಮವಾರ, 29 ಮಾರ್ಚ್ 2021 (09:13 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯನ್ನು ಗೆದ್ದ ಟೀಂ ಇಂಡಿಯಾಗೆ ತಕ್ಕ ಪುರಸ್ಕಾರ ಸಿಗದೇ ಇರುವುದು ನಾಯಕ ವಿರಾಟ್ ಕೊಹ್ಲಿಯ ಅಸಮಾಧಾನಕ್ಕೆ ಕಾರಣವಾಗಿದೆ.
Photo Courtesy: Google


ಸಾಮಾನ್ಯವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ, ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ತಂಡದ ಪಾಲಾಗುತ್ತದೆ. ಆದರೆ ಈ ಸರಣಿಯಲ್ಲಿ ಎರಡೂ ಪ್ರಶಸ್ತಿಗಳನ್ನೂ ಭಾರತ ತಂಡದಲ್ಲಿ ಅರ್ಹರಿದ್ದರೂ ಎದುರಾಳಿ ತಂಡಕ್ಕೆ ನೀಡಲಾಗಿದೆ. ನಿನ್ನೆಯ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿ ಇಂಗ್ಲೆಂಡ್ ನ ಸ್ಯಾಮ್ ಕ್ಯುರೇನ್ ಗೆ ನೀಡಲಾಗಿದ್ದರೆ, ಈ ಸರಣಿಯ ಶ್ರೇಷ್ಠ ಆಟಗಾರ ಪ್ರಶಸ್ತಿ ಇಂಗ್ಲೆಂಡ್ ತಂಡದ ಜಾನಿ ಬೇರ್ ಸ್ಟೋಗೆ ನೀಡಲಾಗಿದೆ. ಇದು ಕೊಹ್ಲಿ ಅಸಮಾಧಾನಕ್ಕೆ ಗುರಿಯಾಗಿದೆ.

ಪ್ರಶಸ್ತಿ ಸಮಾರಂಭದಲ್ಲಿ ಕೊಹ್ಲಿ ಈ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ‘ಶ್ರಾದ್ಧೂಲ್ ಗೆ ಪಂದ್ಯ ಶ್ರೇಷ್ಠ ಮತ್ತು ಈ ಸರಣಿಯುದ್ದಕ್ಕೂ ಕಡಿಮೆ ಎಕಾನಮಿ ರೇಟ್ ನಲ್ಲಿ ಬೌಲಿಂಗ್ ಮಾಡಿ ವಿಕೆಟ್ ಕಿತ್ತ ಭುವನೇಶ್ವರ್ ಕುಮಾರ್ ಗೆ ಸರಣಿ ಶ್ರೇಷ್ಠ ಪ್ರಶಸ್ತಿ ಕೊಡದೇ ಇರುವುದು ನನಗೆ ಅಚ್ಚರಿಯಾಗಿದೆ’ ಎಂದು ಕಿಡಿ ಕಾರಿದ್ದಾರೆ. ಶ್ರಾದ್ಧೂಲ್ ನಿನ್ನೆಯ ಪಂದ್ಯದಲ್ಲಿ ಇಂಗ್ಲೆಂಡ್ ನ ಪ್ರಮುಖ ನಾಲ್ಕು ವಿಕೆಟ್ ಕಬಳಿಸಿದ್ದಲ್ಲದೆ, ಬ್ಯಾಟಿಂಗ್ ನಲ್ಲೂ 21 ಎಸೆತಗಳಲ್ಲಿ 30 ರನ್ ಗಳಿಸಿ ಭಾರತದ ಮೊತ್ತ 300 ರ ಗಡಿ ದಾಟಲು ಕಾರಣರಾಗಿದ್ದರು. ಗೆದ್ದ ತಂಡದ ಸಾಧಕರನ್ನು ಕಡೆಗಣಿಸಿ ಸೋತ ತಂಡಕ್ಕೆ ಸನ್ಮಾನ ಮಾಡಿರುವುದು ಕೊಹ್ಲಿ ಮಾತ್ರವಲ್ಲದೆ, ಭಾರತೀಯ ಕ್ರಿಕೆಟ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments