ಸ್ಫೋಟಕ ಬ್ಯಾಟ್ಸಮೆನ್ ವಿರಾಟ್ ಕೊಹ್ಸಿ ಎಲ್ಲಾ ವಿಧದ ಕ್ರಿಕೆಟ್ ಪಂದ್ಯಾವಳಿಗಳಿಗೆ ಉತ್ತಮ ನಾಯಕರಾಗುವ ಅರ್ಹತೆಯಿದೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.
ವಿರಾಟ್ ಕೊಹ್ಲಿ ತಂಡದ ಆಟಗಾರರಿಗೆ ಪ್ರೇರಣೆಯಾಗಿದ್ದಲ್ಲದೇ ಕಠಿಣ ಸಂದರ್ಭಗಳಲ್ಲಿ ತಂಡಕ್ಕೆ ಜಯತಂದುಕೊಡುವ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದಲೇ ತಂಡದಲ್ಲಿ ವಿಶೇಷ ವ್ಯಕ್ತಿಯಾಗಿದ್ದಾರೆ ಎಂದು ಹೊಗಳಿದ್ದಾರೆ.
ವಿರಾಟ್ ಕೊಹ್ಲಿ ಕ್ರಿಕೆಟ್ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ನಂತರ ಪ್ರತಿಯೊಂದು ಪಂದ್ಯದಿಂದ ಪಂದ್ಯಕ್ಕೆ ತಮ್ಮ ಆಟದಲ್ಲಿ ಸುಧಾರಣೆ ತರಲು ಪ್ರಯತ್ನಿಸುತ್ತಾರೆ. ತಂಡವನ್ನು ಗೆಲುವಿಗೆ ದಡವನ್ನು ಮುಟ್ಟಿಸುವಲ್ಲಿ ಅವರು ಪಡುವ ಶ್ರಮ ಯಾರು ಅಲ್ಲಗಳೆಯಲಾಗದು. ಪ್ರತಿಯೊಂದು ಪಂದ್ಯದಲ್ಲೂ ಪಂದ್ಯ ಪುರುಷೋತ್ತಮನಾಗಬೇಕು ಎನ್ನುವ ಉದ್ದೇಶದಿಂದಲೇ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ದೈಹಿಕ ಕ್ಷಮತೆಯನ್ನು ಹೊಂದಿದ್ದಲ್ಲದೇ, ಎದುರಾಳಿ ತಂಡದ ರಣತಂತ್ರಗಳನ್ನು ಭೇಧಿಸುತ್ತಾರೆ. ಎದುರಾಳಿ ತಂಡದ ವಿರುದ್ಧ ಪ್ರತಿತಂತ್ರ ರೂಪಿಸಿ ಅವರನ್ನು ಖೆಡ್ಡಾಕ್ಕೆ ಕೆಡುವುತ್ತಾರೆ. ಅದೇ ವಿರಾಟ್ ಕೊಹ್ಲಿ ವಿಶೇಷ ಎಂದು ಸಂತಸ ವ್ಯಕ್ತಪಡಿಸಿದರು.
ಕೊಹ್ಲಿ ಕ್ರಿಕೆಟ್ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಮುಂಬರುವ ದಿನಗಳಲ್ಲೂ ಅಭಿಮಾನಿಗಳು ಅವರಿಂದ ಮತ್ತಷ್ಟು ನಿರೀಕ್ಷಿಸಿದ್ದಾರೆ. ಕೊಹ್ಲಿಗೆ ಉತ್ತಮ ಭವಿಷ್ಯವಿದೆ ಎಂದು ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ