Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಅತ್ಯುತ್ತಮ ನಾಯಕರಾಗುವ ಅರ್ಹತೆಯಿದೆ: ಎಂ.ಎಸ್.ಧೋನಿ

Webdunia
ಶನಿವಾರ, 20 ಆಗಸ್ಟ್ 2016 (12:53 IST)
ಸ್ಫೋಟಕ ಬ್ಯಾಟ್ಸಮೆನ್ ವಿರಾಟ್ ಕೊಹ್ಸಿ ಎಲ್ಲಾ ವಿಧದ ಕ್ರಿಕೆಟ್ ಪಂದ್ಯಾವಳಿಗಳಿಗೆ ಉತ್ತಮ ನಾಯಕರಾಗುವ ಅರ್ಹತೆಯಿದೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ. 
 
ವಿರಾಟ್ ಕೊಹ್ಲಿ ತಂಡದ ಆಟಗಾರರಿಗೆ ಪ್ರೇರಣೆಯಾಗಿದ್ದಲ್ಲದೇ ಕಠಿಣ ಸಂದರ್ಭಗಳಲ್ಲಿ ತಂಡಕ್ಕೆ ಜಯತಂದುಕೊಡುವ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದಲೇ ತಂಡದಲ್ಲಿ ವಿಶೇಷ ವ್ಯಕ್ತಿಯಾಗಿದ್ದಾರೆ ಎಂದು ಹೊಗಳಿದ್ದಾರೆ.
 
ವಿರಾಟ್ ಕೊಹ್ಲಿ ಕ್ರಿಕೆಟ್ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ನಂತರ ಪ್ರತಿಯೊಂದು ಪಂದ್ಯದಿಂದ ಪಂದ್ಯಕ್ಕೆ ತಮ್ಮ ಆಟದಲ್ಲಿ ಸುಧಾರಣೆ ತರಲು ಪ್ರಯತ್ನಿಸುತ್ತಾರೆ. ತಂಡವನ್ನು ಗೆಲುವಿಗೆ ದಡವನ್ನು ಮುಟ್ಟಿಸುವಲ್ಲಿ ಅವರು ಪಡುವ ಶ್ರಮ ಯಾರು ಅಲ್ಲಗಳೆಯಲಾಗದು. ಪ್ರತಿಯೊಂದು ಪಂದ್ಯದಲ್ಲೂ ಪಂದ್ಯ ಪುರುಷೋತ್ತಮನಾಗಬೇಕು ಎನ್ನುವ ಉದ್ದೇಶದಿಂದಲೇ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ತಿಳಿಸಿದ್ದಾರೆ. 
 
ವಿರಾಟ್ ಕೊಹ್ಲಿ ದೈಹಿಕ ಕ್ಷಮತೆಯನ್ನು ಹೊಂದಿದ್ದಲ್ಲದೇ, ಎದುರಾಳಿ ತಂಡದ ರಣತಂತ್ರಗಳನ್ನು ಭೇಧಿಸುತ್ತಾರೆ. ಎದುರಾಳಿ ತಂಡದ ವಿರುದ್ಧ ಪ್ರತಿತಂತ್ರ ರೂಪಿಸಿ ಅವರನ್ನು ಖೆಡ್ಡಾಕ್ಕೆ ಕೆಡುವುತ್ತಾರೆ. ಅದೇ ವಿರಾಟ್ ಕೊಹ್ಲಿ ವಿಶೇಷ ಎಂದು ಸಂತಸ ವ್ಯಕ್ತಪಡಿಸಿದರು.
 
ಕೊಹ್ಲಿ ಕ್ರಿಕೆಟ್ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಮುಂಬರುವ ದಿನಗಳಲ್ಲೂ ಅಭಿಮಾನಿಗಳು ಅವರಿಂದ ಮತ್ತಷ್ಟು ನಿರೀಕ್ಷಿಸಿದ್ದಾರೆ. ಕೊಹ್ಲಿಗೆ ಉತ್ತಮ ಭವಿಷ್ಯವಿದೆ ಎಂದು ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments