Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ಸಾರಥ್ಯದ ಕ್ರಿಕೆಟ್ ಟೂರ್ನಿಗೆ ವೀರೇಂದ್ರ ಸೆಹ್ವಾಗ್, ದಿಲ್ಶನ್!

ಕಿಚ್ಚ ಸುದೀಪ್ ಸಾರಥ್ಯದ ಕ್ರಿಕೆಟ್ ಟೂರ್ನಿಗೆ ವೀರೇಂದ್ರ ಸೆಹ್ವಾಗ್, ದಿಲ್ಶನ್!
ಬೆಂಗಳೂರು , ಸೋಮವಾರ, 23 ಜುಲೈ 2018 (09:44 IST)
ಬೆಂಗಳೂರು: ಕಿಚ್ಚ ಸುದೀಪ್ ಸಾರಥ್ಯದಲ್ಲಿ ನಡೆಯುತ್ತಿರುವ ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಎರಡನೇ ಆವೃತ್ತಿಗೆ ಕಾಲಿಟ್ಟಿದ್ದು, ಈ ಬಾರಿ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಗ್ಯಾರಂಟಿ.
 

ಈ ಬಾರಿ ಅಂತಾರಾಷ್ಟ್ರೀಯ ಖ್ಯಾತಿಯ ಆಟಗಾರರೂ ಒಂದೊಂದು ಪಂದ್ಯದಲ್ಲಿ ಆಡಲಿರುವುದು ಟೂರ್ನಿಯ ವಿಶೇಷ. ಭಾರತದ ಹೊಡೆಬಡಿಯ ಆಟಗಾರ ವೀರೇಂದ್ರ ಸೆಹ್ವಾಗ್, ಶ್ರೀಲಂಕಾದ ತಿಲಕರತ್ನೆ ದಿಲ್ಶನ್, ದ.ಆಫ್ರಿಕಾದ ಹರ್ಷಲ್ ಗಿಬ್ಸ್, ಲ್ಯಾನ್ಸ್ ಕ್ಲೂಸ್ನರ್, ಇಂಗ್ಲೆಂಡ್ ನ ಒವೈಸ್ ಶಾ ಮುಂತಾದ ಅಂತಾರಾಷ್ಟ್ರೀಯ ಆಟಗಾರರು ಪಾಲ್ಗೊಳ್ಳುತ್ತಿದ್ದು, ಕೆಸಿಸಿ ಟೂರ್ನಿಯ ಕಳೆ ಹೆಚ್ಚಿಸಿದೆ.

ಕೆಸಿಸಿ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ಸ್ವತಃ ಸೆಹ್ವಾಗ್ ವಿಡಿಯೋ ಸಂದೇಶ ನೀಡಿರುವುದನ್ನು ಕಿಚ್ಚ ಸುದೀಪ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ. ಸೆಪ್ಟೆಂಬರ್ 8 ಮತ್ತು 9 ರಂದು ಪಂದ್ಯಗಳು ನಡೆಯಲಿವೆ. ಮೊದಲ ದಿನ ನಾಲ್ಕು ಪಂದ್ಯಗಳು ನಡೆಯಲಿದ್ದು, ಎರಡನೇ ದಿನ ಎರಡು ಪಂದ್ಯಗಳು ನಡೆಯಲಿವೆ. ಫೈನಲ್ ಚಿನ್ನಸ್ವಾಮಿ ಅಂಗಣದಲ್ಲಿ ನಡೆಯಲಿದೆ.

ಕನ್ನಡ ಚಲನಚಿತ್ರರಂಗದಿಂದ ಕಿಚ್ಚ ಸುದೀಪ್ ಜತೆಗೆ ಶಿವರಾಜ್ ಕುಮಾರ್, ಉಪೇಂದ್ರ, ಗಣೇಶ್, ಯಶ್ ಪ್ರಮುಖ ಆಕರ್ಷಣೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾಪ್ಟನ್ ಕೊಹ್ಲಿಯನ್ನು ಈ ಕಾರ್ಟೂನ್ ಕ್ಯಾರೆಕ್ಟರ್ ಗೆ ಹೋಲಿಸಿದ ಶಿಖರ್ ಧವನ್