Webdunia - Bharat's app for daily news and videos

Install App

ಕಿಚ್ಚ ಸುದೀಪ್ ಸಾರಥ್ಯದ ಕ್ರಿಕೆಟ್ ಟೂರ್ನಿಗೆ ವೀರೇಂದ್ರ ಸೆಹ್ವಾಗ್, ದಿಲ್ಶನ್!

Webdunia
ಸೋಮವಾರ, 23 ಜುಲೈ 2018 (09:44 IST)
ಬೆಂಗಳೂರು: ಕಿಚ್ಚ ಸುದೀಪ್ ಸಾರಥ್ಯದಲ್ಲಿ ನಡೆಯುತ್ತಿರುವ ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಎರಡನೇ ಆವೃತ್ತಿಗೆ ಕಾಲಿಟ್ಟಿದ್ದು, ಈ ಬಾರಿ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಗ್ಯಾರಂಟಿ.
 

ಈ ಬಾರಿ ಅಂತಾರಾಷ್ಟ್ರೀಯ ಖ್ಯಾತಿಯ ಆಟಗಾರರೂ ಒಂದೊಂದು ಪಂದ್ಯದಲ್ಲಿ ಆಡಲಿರುವುದು ಟೂರ್ನಿಯ ವಿಶೇಷ. ಭಾರತದ ಹೊಡೆಬಡಿಯ ಆಟಗಾರ ವೀರೇಂದ್ರ ಸೆಹ್ವಾಗ್, ಶ್ರೀಲಂಕಾದ ತಿಲಕರತ್ನೆ ದಿಲ್ಶನ್, ದ.ಆಫ್ರಿಕಾದ ಹರ್ಷಲ್ ಗಿಬ್ಸ್, ಲ್ಯಾನ್ಸ್ ಕ್ಲೂಸ್ನರ್, ಇಂಗ್ಲೆಂಡ್ ನ ಒವೈಸ್ ಶಾ ಮುಂತಾದ ಅಂತಾರಾಷ್ಟ್ರೀಯ ಆಟಗಾರರು ಪಾಲ್ಗೊಳ್ಳುತ್ತಿದ್ದು, ಕೆಸಿಸಿ ಟೂರ್ನಿಯ ಕಳೆ ಹೆಚ್ಚಿಸಿದೆ.

ಕೆಸಿಸಿ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ಸ್ವತಃ ಸೆಹ್ವಾಗ್ ವಿಡಿಯೋ ಸಂದೇಶ ನೀಡಿರುವುದನ್ನು ಕಿಚ್ಚ ಸುದೀಪ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ. ಸೆಪ್ಟೆಂಬರ್ 8 ಮತ್ತು 9 ರಂದು ಪಂದ್ಯಗಳು ನಡೆಯಲಿವೆ. ಮೊದಲ ದಿನ ನಾಲ್ಕು ಪಂದ್ಯಗಳು ನಡೆಯಲಿದ್ದು, ಎರಡನೇ ದಿನ ಎರಡು ಪಂದ್ಯಗಳು ನಡೆಯಲಿವೆ. ಫೈನಲ್ ಚಿನ್ನಸ್ವಾಮಿ ಅಂಗಣದಲ್ಲಿ ನಡೆಯಲಿದೆ.

ಕನ್ನಡ ಚಲನಚಿತ್ರರಂಗದಿಂದ ಕಿಚ್ಚ ಸುದೀಪ್ ಜತೆಗೆ ಶಿವರಾಜ್ ಕುಮಾರ್, ಉಪೇಂದ್ರ, ಗಣೇಶ್, ಯಶ್ ಪ್ರಮುಖ ಆಕರ್ಷಣೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments