Webdunia - Bharat's app for daily news and videos

Install App

ಮೊದಲ ಪಂದ್ಯ ಸೋತ ಮೇಲೂ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳಲು ಕಾರಣ ಬಯಲು!

Webdunia
ಭಾನುವಾರ, 15 ಜುಲೈ 2018 (09:25 IST)
ಲಾರ್ಡ್ಸ್: ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಸೋತ ಮೇಲೆ ಯಾವ ತಂಡವೂ ಸಾಮಾನ್ಯವಾಗಿ ನಂತರದ ಪಂದ್ಯದಲ್ಲಿ ಅದೇ ತಪ್ಪನ್ನು ಮಾಡುವುದಿಲ್ಲ. ಆದರೆ ಇಂಗ್ಲೆಂಡ್ ಅದನ್ನೇ ಮಾಡಿದೆ.

ದ್ವಿತೀಯ ಏಕದಿನ ಪಂದ್ಯದಲ್ಲಿ ತಾವು ಟಾಸ್ ಗೆದ್ದರೂ ಇಯಾನ್ ಮಾರ್ಗನ್ ಮತ್ತೆ ಮೊದಲು ಬ್ಯಾಟಿಂಗ್ ಮಾಡುವುದಾಗಿ ಹೇಳಿಕೊಂಡರು. ಇದು ಹಲವರನ್ನು ಅಚ್ಚರಿಗೆ ದೂಡಿತು. ಅದರಲ್ಲೂ ಟೀಂ ಇಂಡಿಯಾ ಚೇಸ್ ಮಾಡುವುದರಲ್ಲಿ ಯಾವತ್ತೂ ಮುಂದು ಎನ್ನುವ ಕಾರಣಕ್ಕೆ ಯಾವ ತಂಡವೂ ಈ ದುಸ್ಸಾಹಸ ಮಾಡಲ್ಲ.

ಆದರೆ ಇಂಗ್ಲೆಂಡ್ ನಾಯಕನ ಈ ನಿರ್ಧಾರದ ಹಿಂದೆ ಇದ್ದಿದ್ದು, ಕುಲದೀಪ್ ಯಾದವ್ ಭಯ! ದ್ವಿತೀಯ ಸರದಿಯಲ್ಲಿ ಬ್ಯಾಟಿಂಗ್ ಮಾಡಿದರೆ ಪಿಚ್ ಸ್ಪಿನ್ನರ್ ಗಳಿಗೆ ಅನುಕೂಲಕರವಾಗಿರುತ್ತದೆ. ಕುಲದೀಪ್ ಯಾದವ್ ಎದುರಿಸುವುದು ಕಷ್ಟವಾಗುತ್ತದೆ. ಇದೇ ಕಾರಣಕ್ಕೆ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ನ್ನೇ ಆರಿಸಿಕೊಂಡಿತು. ಸ್ವತಃ ಇಂಗ್ಲೆಂಡ್ ನಾಯಕ ಮಾರ್ಗನ್ ಇದರ ಸುಳಿವು ನೀಡಿದ್ದಾರೆ. ಕುಲದೀಪ್ ಯಾದವ್ ರನ್ನು ಹೆಚ್ಚು ಹೊತ್ತು ಎದುರಿಸಿದಷ್ಟು ನಮಗೆ ಅವರು ಯಾವ ರೀತಿ ಬೌಲಿಂಗ್ ಮಾಡುತ್ತಾರೆ ಎಂದು ಗೊತ್ತಾಗುತ್ತದೆ ಎಂದು ತಾವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿರುವುದರ ಹಿಂದಿನ ಕಾರಣ ವಿವರಿಸಿದ್ದಾರೆ.

ಟೀಂ ಇಂಡಿಯಾದ ದುರದೃಷ್ಟಕ್ಕೆ ಮಾರ್ಗನ್ ಈ ಲೆಕ್ಕಾಚಾರ ಸರಿಯಾಗಿಯೇ ಕೆಲಸ ಮಾಡಿತು. ಭಾರತ ದ್ವಿತೀಯ ಪಂದ್ಯವನ್ನು 86 ರನ್ ಗಳಿಂದ ಸೋತಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments