Publish Date: Sat, 09 Jun 2018 (09:10 IST)
Updated Date: Sat, 09 Jun 2018 (09:11 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ತಮ್ಮ ಪುತ್ರ ಅರ್ಜುನ್ ತೆಂಡುಲ್ಕರ್ ಭಾರತ ಅಂಡರ್ 19 ತಂಡಕ್ಕೆ ಆಯ್ಕೆಯಾಗಿರುವುದಕ್ಕೆ ಖುಷಿಯಾಗಿದ್ದಾರೆ. ಅದರ ಜತೆಗೆ ಮಗನಿಗೆ ಸಂದೇಶವನ್ನೂ ಕೊಟ್ಟಿದ್ದಾರೆ.
18 ವರ್ಷದ ಆಲ್ ರೌಂಡರ್ ಅರ್ಜುನ್ ತೆಂಡುಲ್ಕರ್ ಶ್ರೀಲಂಕಾ ವಿರುದ್ಧದ ನಾಲ್ಕು ದಿನಗಳ ಪಂದ್ಯ ಮತ್ತು ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಪುತ್ರ ಆಯ್ಕೆಯಾಗಿರುವುದಕ್ಕೆ ಸಚಿನ್ ಸಂತಸ ವ್ಯಕ್ತಪಡಿಸಿದ್ದಾರೆ.
‘ಅರ್ಜುನ್ ಅಂಡರ್ 19 ತಂಡಕ್ಕೆ ಆಯ್ಕೆಯಾಗಿರುವುದು ನೋಡಿ ಖುಷಿಯಾಗಿದೆ. ಅವನ ಕ್ರಿಕೆಟ್ ವೃತ್ತಿ ಜೀವನದಲ್ಲಿ ಇದೊಂದು ಮೈಲಿಗಲ್ಲು. ಅಂಜಲಿ (ಸಚಿನ್ ಪತ್ನಿ) ಮತ್ತು ನಾನು ಅರ್ಜುನ್ ನ ಆಯ್ಕೆಯನ್ನು ಸದಾ ಗೌರವಿಸುತ್ತೇವೆ ಮತ್ತು ಬೆಂಬಲಿಸುತ್ತೇವೆ’ ಎಂದು ಸಚಿನ್ ಖುಷಿಯಾಗಿ ಹೇಳಿಕೊಂಡಿದ್ದಾರೆ. ಇದೀಗ ಸಚಿನ್ ಪುತ್ರನಿಗೆ ಕ್ರಿಕೆಟ್ ವಾಲ್ ರಾಹುಲ್ ದ್ರಾವಿಡ್ ಕೋಚ್ ಆಗಲಿರುವುದು ಮತ್ತೊಂದು ವಿಶೇಷ!
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.