Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ ಚಂದ್ರನಿಂದ ಇಳಿದು ಬಂದವರಾ ಎಂದ ಟೀಂ ಇಂಡಿಯಾ ವೇಗಿ

Krishnaveni K
ಶನಿವಾರ, 16 ಮಾರ್ಚ್ 2024 (12:21 IST)
ಮುಂಬೈ: ಹಾರ್ದಿಕ್ ಪಾಂಡ್ಯಗೆ ಮಾತ್ರ ಯಾಕೆ ಹೊಸ ರೂಲ್ಸ್? ಅವರೇನು ಚಂದ್ರನಿಂದ ಇಳಿದುಬಂದಿದ್ದಾರಾ ಎಂದು ಟೀಂ ಇಂಡಿಯಾ ಮಾಜಿ ವೇಗಿ ಪ್ರವೀಣ್ ಕುಮಾರ್ ಪ್ರಶ್ನಿಸಿದ್ದಾರೆ.

ರೆಡ್ ಬಾಲ್ ಕ್ರಿಕೆಟ್ ಆಡಲು ಹಿಂದೇಟು ಹಾಕುತ್ತಿರುವ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ರನ್ನು ಇತ್ತೀಚೆಗೆ ಬಿಸಿಸಿಐ ತನ್ನ ಗುತ್ತಿಗೆ ಪಟ್ಟಿಯಿಂದ ಹೊರ ಹಾಕಿತ್ತು. ಆದರೆ ಹಾರ್ದಿಕ್ ಪಾಂಡ್ಯ ಕೂಡಾ ಟೆಸ್ಟ್ ಫಾರ್ಮ್ಯಾಟ್ ಆಡಲ್ಲ. ಹೀಗಿದ್ದರೂ ಅವರಿಗೆ ಮಾತ್ರ ಗುತ್ತಿಗೆ ನೀಡಿದೆ.

ಇದೇ ಕಾರಣಕ್ಕೆ ಪ್ರವೀಣ್ ಕುಮಾರ್ ಯೂ ಟ್ಯೂಬ್ ಸಂದರ್ಸನವೊಂದರಲ್ಲಿ ಹಾರ್ದಿಕ್ ಗೆ ಮಾತ್ರ ಈ ನಿಯಮಗಳು ಅನ್ವಯಿಸಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ‘ಹಾರ್ದಿಕ್ ಪಾಂಡ್ಯ ಚಂದ್ರನಿಂದ ನೇರವಾಗಿ ಭೂಮಿಗೆ ಇಳಿದು ಬಂದವರಾ? ಅವರೂ ರೆಡ್ ಬಾಲ್ ಕ್ರಿಕೆಟ್ ಆಡಲೇಬೇಕು. ಒಬ್ಬೊಬ್ಬ ಆಟಗಾರರಿಗೆ ಒಂದೊಂದು ನಿಯಮ ಯಾಕೆ? ಅವರಿಗೂ ಬಿಸಿಸಿಐ ಶಿಕ್ಷೆ ನೀಡಲೇಬೇಕು ಎಂದು ಪ್ರವೀಣ‍್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ರನ್ನು ಇತ್ತೀಚೆಗೆ ಗುತ್ತಿಗೆ ಪಟ್ಟಿಯಿಂದ ಹೊರಹಾಕಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆದರೆ ಹಾರ್ದಿಕ್ ಪಾಂಡ್ಯಗೆ ಅವರ ಬೆನ್ನು ಶಸ್ತ್ರಚಿಕಿತ್ಸೆ ಬಳಿಕ ಟೆಸ್ಟ್ ಮಾದರಿಯಲ್ಲಿ ಆಡುತ್ತಿಲ್ಲ. ವೈದ್ಯಕೀಯ ಕಾರಣಗಳಿಗಾಗಿ ಬಿಸಿಸಿಐ ಹಾರ್ದಿಕ್ ಗೆ ವಿನಾಯ್ತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

ಮುಂದಿನ ಸುದ್ದಿ
Show comments