Webdunia - Bharat's app for daily news and videos

Install App

ಸಂಜೆ 5 ಗಂಟೆಗೆ ಮಂಡನೆಯಾಗುತ್ತಿದ್ದ ಕೇಂದ್ರ ಬಜೆಟ್ ಸಮಯ ಬದಲಾವಣೆ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ

Krishnaveni K
ಮಂಗಳವಾರ, 23 ಜುಲೈ 2024 (08:59 IST)
ನವದೆಹಲಿ: ಇಂದು ಸಂಸತ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಜೆಟ್ ನಿರ್ಮಲಾ ಪಾಲಿನ 7 ನೇ ಬಜೆಟ್ ಆಗಿದ್ದು ಸತತ ಏಳು ಬಾರಿ ಬಜೆಟ್ ಮಂಡನೆ ಮಾಡಿ ದಾಖಲೆ ಮಾಡುತ್ತಿದ್ದಾರೆ. ಬಜೆಟ್ ಮಂಡನೆಯ ಸಮಯದ ಕುರಿತು ಇಂಟ್ರೆಸ್ಟಿಂಗ್ ವಿಚಾರವೊಂದು ಇಲ್ಲಿದೆ ನೋಡಿ.

ಕೇಂದ್ರ ಬಜೆಟ್ ಮೊದಲೆಲ್ಲಾ ಬೆಳಿಗ್ಗೆ 11 ಗಂಟೆಗೆ ಮಂಡನೆಯಾಗುತ್ತಿರಲಿಲ್ಲ. ಇದು ಕಳೆದ 20 ವರ್ಷಗಳಿಂದೀಚೆಗೆ ನಡೆದುಕೊಂಡು ಬಂದ ಸಂಪ್ರದಾಯವಷ್ಟೇ. ಅದಕ್ಕಿಂತ ಮೊದಲು ಕೇಂದ್ರ ಬಜೆಟ್ ನ್ನು ಭಾರತೀಯ ಸಮಯದ ಪ್ರಕಾರ ಸಂಜೆ 5 ಗಂಟೆಗೆ ಮಂಡಿಸಲಾಗುತ್ತಿತ್ತು.

ಆದರೆ ಇದು ಬ್ರಿಟಿಷ್ ಪದ್ಧತಿಯಾಗಿತ್ತು. ಪ್ರತೀ ವರ್ಷ ಫೆಬ್ರವರಿ ತಿಂಗಳ ಕೊನೆಯ ದಿನ ಸಂಜೆ 5 ಗಂಟೆಗೆ ಕೇಂದ್ರ ಬಜೆಟ್ ಎಂದು ನಿಗದಿಯಾಗಿತ್ತು. ಬ್ರಿಟಿಷ್ ಕಾಲದ ಪದ್ಧತಿಯಂತೆ ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಸಮಯ ನಿಗದಿ ಮಾಡಲಾಗಿತ್ತು. ಅಂದರೆ ಬ್ರಿಟಿಷ್ ಸಮಯಕ್ಕಿಂತ ಭಾರತದ ಸಮಯ 4 ಗಂಟೆ 30 ನಿಮಿಷದಷ್ಟು ಮುಂದಿದೆ. ಹೀಗಾಗಿ ಲಂಡನ್ ನಲ್ಲಿ ಹಗಲು ಹೊತ್ತು ಬರುವಂತೆ ಸಂಜೆ 5 ಗಂಟೆಗೆ ಬಜೆಟ್ ಮಂಡಿಸಲಾಗುತ್ತಿತ್ತು.

ಆದರೆ ಈ ಬ್ರಿಟಿಷ್ ಗುಲಾಮಗಿರಿ ಸಂಪ್ರದಾಯ ಮುರಿದಿದ್ದು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರ. 1999 ರಲ್ಲಿ ವಾಜಪೇಯಿ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದ ಯಶ್ವಂತ್ ಸಿನ್ಹಾ ಮೊದಲ ಬಾರಿಗೆ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಮಾಡಿದರು. ಅದಾದ ಬಳಿಕ ಬ್ರಿಟಿಷ್ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು ನಮ್ಮದೇ ಸಮಯಕ್ಕೆ ಅನುಗುಣವಾಗಿ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಮಾಡುವ ಸಂಪ್ರದಾಯ ಮುಂದುವರಿಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments