ಮುಂಬೈ: ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಪ್ರಸಕ್ತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಟಿ20 ಸರಣಿಯನ್ನು ಅರ್ಧಕ್ಕೇ ಬಿಟ್ಟು ದಿಡೀರ್ ಮನೆಗೆ ಮರಳಿರುವುದಕ್ಕೆ ಕಾರಣ ಬಯಲಾಗಿದೆ.
ಜಸ್ಪ್ರೀತ್ ಬುಮ್ರಾ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಆಡಿದ್ದರು. ಆದರೆ ಮೂರನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಟಾಸ್ ವೇಳೆ ನಾಯಕ ಸೂರ್ಯಕುಮಾರ್ ಯಾದವ್ ಅವರು ಅನಿವಾರ್ಯ ಕಾರಣಗಳಿಂದ ಮನೆಗೆ ಮರಳಿದ್ದಾರೆ ಎಂದಿದ್ದರು. ಅದಕ್ಕೀಗ ಕಾರಣ ಬಯಲಾಗಿದೆ.
ಜಸ್ಪ್ರೀತ್ ಬುಮ್ರಾ ಕುಟುಂಬಸ್ಥರೊಬ್ಬರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಅವರು ಅನಿವಾರ್ಯವಾಗಿ ಮನೆಗೆ ತೆರಳಬೇಕಾಯಿತು. ಅವರಿಗೆ ಈಗ ಕುಟುಂಬವೇ ಪ್ರಮುಖ ಆದ್ಯತೆ. ಒಂದು ವೇಳೆ ಅವರ ಆಪ್ತರು ಚೇತರಿಸಿಕೊಂಡರೆ ಅಹ್ಮದಾಬಾದ್ ನಲ್ಲಿ ನಡೆಯಲಿರುವ ಐದನೇ ಟಿ20 ಪಂದ್ಯದ ವೇಳೆಗೆ ತಂಡಕ್ಕೆ ಮರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.
ಈಗಾಗಲೇ ಆಲ್ ರೌಂಡರ್ ಅಕ್ಸರ್ ಪಟೇಲ್ ಅನಾರೋಗ್ಯದ ರೂಪದಲ್ಲಿ ಟೀಂ ಇಂಡಿಯಾಗೆ ಹೊಡೆತ ಬಿದ್ದಿದೆ. ಇದೀಗ ಬುಮ್ರಾ ಕೂಡಾ ತೆರಳಿದ್ದಾರೆ. ಹಾಗಿದ್ದರೂ ಇವರಿಬ್ಬರ ಅನುಪಸ್ಥಿತಿಯಲ್ಲೂ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯವನ್ನು ಗೆದ್ದಿತ್ತು ಎನ್ನುವುದನ್ನೂ ಮರೆಯುವಂತಿಲ್ಲ.