ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

Krishnaveni K
ಮಂಗಳವಾರ, 16 ಡಿಸೆಂಬರ್ 2025 (08:48 IST)
ಮುಂಬೈ: ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಪ್ರಸಕ್ತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಟಿ20 ಸರಣಿಯನ್ನು ಅರ್ಧಕ್ಕೇ ಬಿಟ್ಟು ದಿಡೀರ್ ಮನೆಗೆ ಮರಳಿರುವುದಕ್ಕೆ ಕಾರಣ ಬಯಲಾಗಿದೆ.

ಜಸ್ಪ್ರೀತ್ ಬುಮ್ರಾ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಆಡಿದ್ದರು. ಆದರೆ ಮೂರನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಟಾಸ್ ವೇಳೆ ನಾಯಕ ಸೂರ್ಯಕುಮಾರ್ ಯಾದವ್ ಅವರು ಅನಿವಾರ್ಯ ಕಾರಣಗಳಿಂದ ಮನೆಗೆ ಮರಳಿದ್ದಾರೆ ಎಂದಿದ್ದರು. ಅದಕ್ಕೀಗ ಕಾರಣ ಬಯಲಾಗಿದೆ.

ಜಸ್ಪ್ರೀತ್ ಬುಮ್ರಾ ಕುಟುಂಬಸ್ಥರೊಬ್ಬರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಅವರು ಅನಿವಾರ್ಯವಾಗಿ ಮನೆಗೆ ತೆರಳಬೇಕಾಯಿತು. ಅವರಿಗೆ ಈಗ ಕುಟುಂಬವೇ ಪ್ರಮುಖ ಆದ್ಯತೆ. ಒಂದು ವೇಳೆ ಅವರ ಆಪ್ತರು ಚೇತರಿಸಿಕೊಂಡರೆ ಅಹ್ಮದಾಬಾದ್ ನಲ್ಲಿ ನಡೆಯಲಿರುವ ಐದನೇ ಟಿ20 ಪಂದ್ಯದ ವೇಳೆಗೆ ತಂಡಕ್ಕೆ ಮರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಈಗಾಗಲೇ ಆಲ್ ರೌಂಡರ್ ಅಕ್ಸರ್ ಪಟೇಲ್ ಅನಾರೋಗ್ಯದ ರೂಪದಲ್ಲಿ ಟೀಂ ಇಂಡಿಯಾಗೆ ಹೊಡೆತ ಬಿದ್ದಿದೆ. ಇದೀಗ ಬುಮ್ರಾ ಕೂಡಾ ತೆರಳಿದ್ದಾರೆ. ಹಾಗಿದ್ದರೂ ಇವರಿಬ್ಬರ ಅನುಪಸ್ಥಿತಿಯಲ್ಲೂ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯವನ್ನು ಗೆದ್ದಿತ್ತು ಎನ್ನುವುದನ್ನೂ ಮರೆಯುವಂತಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments