Daily Horoscope

ಕರುಣ್ ನಾಯರ್ ಗೆ ಕೊಕ್ ಕೊಟ್ಟಿದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿಯ ಸಮಜಾಯಿಷಿ ಏನು ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (06:38 IST)
ಮುಂಬೈ: ಇಂಗ್ಲೆಂಡ್ ಸರಣಿಯಲ್ಲಿ ಆಡುವ ಬಳಗದಲ್ಲಿದ್ದೂ ಅವಕಾಶ ಸಿಗಲಿಲ್ಲ. ಇದೀಗ ತವರಿನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದಲ್ಲೇ ಇಲ್ಲ. ಇದು ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ದ್ವಿತೀಯ ಆಟಗಾರ ಕರುಣ್ ನಾಯರ್ ದುಸ್ಥಿತಿ.

ಹಾಗಿದ್ದರೂ ಕರುಣ್ ನಾಯರ್ ಗೆ ಸ್ಥಾನ ನೀಡದೇ ಇರಲು ಕಾರಣವೇನು ಎಂಬುದಕ್ಕೆ ಇದೀಗ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸಮಜಾಯಿಷಿ ನೀಡಿದ್ದಾರೆ.

‘ಕರುಣ್ ಇಂಗ್ಲೆಂಡ್ ನಲ್ಲಿದ್ದಾಗಲೇ ನಾವು ಅವರ ಬಳಿ ಈ ಬಗ್ಗೆ ಸ್ಪಷ್ಟವಾಗಿ ಮಾತನಾಡಿದ್ದೆವು. ಅವರಿಗೆ ಅವಕಾಶ ಸಿಗದೇ ಇರುವುದು ದುರದೃಷ್ಟಕರ. ಆದರೆ ಮಾತುಕತೆ ಮೂಲಕ ನಾವು ಎಲ್ಲವನ್ನೂ ಸ್ಪಷ್ಟವಾಗಿ ತಿಳಿಸಿದ್ದೇವೆ. ಮುಂದೆ ರಣಜಿ ಟ್ರೋಫಿ, ಭಾರತ ಎ ಕ್ರಿಕೆಟ್ ಸರಣಿ ಸೇರಿದಂತೆ ದೇಶೀಯ ಟೂರ್ನಿಗಳು ಬರಲಿವೆ. ಅದರಲ್ಲಿ ಉತ್ತಮ ರನ್ ಗಳಿಸಲಿ. ಕರುಣ್ ರನ್ನು ನಾವು ಟೆಸ್ಟ್ ತಂಡದಿಂದ ಸಂಪೂರ್ಣವಾಗಿ ಮೂಲೆಗುಂಪು ಮಾಡಿಲ್ಲ. ಮುಂದೆ ದೇಶೀಯ ಟೂರ್ನಿಯಲ್ಲಿ ಆಡಿದಾಗ ಅವರಿಗೆ ಖಂಡಿತಾ ಸ್ಥಾನ ಸಿಗುತ್ತದೆ’ ಎಂದು ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ. ರಾಷ್ಟ್ರೀಯ ತಂಡದಲ್ಲಿ ಆಡುವ ಬಳಗದಲ್ಲಿ ಸ್ಥಾನ ನೀಡದೇ ಅವರು ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಹೇಗೆ ಸಾಧ್ಯ? ಇದನ್ನು ಆಯ್ಕೆಗಾರರೇ ಹೇಳಬೇಕು!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments