Webdunia - Bharat's app for daily news and videos

Install App

ಕರುಣ್ ನಾಯರ್ ಗೆ ಕೊಕ್ ಕೊಟ್ಟಿದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿಯ ಸಮಜಾಯಿಷಿ ಏನು ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (06:38 IST)
ಮುಂಬೈ: ಇಂಗ್ಲೆಂಡ್ ಸರಣಿಯಲ್ಲಿ ಆಡುವ ಬಳಗದಲ್ಲಿದ್ದೂ ಅವಕಾಶ ಸಿಗಲಿಲ್ಲ. ಇದೀಗ ತವರಿನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದಲ್ಲೇ ಇಲ್ಲ. ಇದು ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ದ್ವಿತೀಯ ಆಟಗಾರ ಕರುಣ್ ನಾಯರ್ ದುಸ್ಥಿತಿ.

ಹಾಗಿದ್ದರೂ ಕರುಣ್ ನಾಯರ್ ಗೆ ಸ್ಥಾನ ನೀಡದೇ ಇರಲು ಕಾರಣವೇನು ಎಂಬುದಕ್ಕೆ ಇದೀಗ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸಮಜಾಯಿಷಿ ನೀಡಿದ್ದಾರೆ.

‘ಕರುಣ್ ಇಂಗ್ಲೆಂಡ್ ನಲ್ಲಿದ್ದಾಗಲೇ ನಾವು ಅವರ ಬಳಿ ಈ ಬಗ್ಗೆ ಸ್ಪಷ್ಟವಾಗಿ ಮಾತನಾಡಿದ್ದೆವು. ಅವರಿಗೆ ಅವಕಾಶ ಸಿಗದೇ ಇರುವುದು ದುರದೃಷ್ಟಕರ. ಆದರೆ ಮಾತುಕತೆ ಮೂಲಕ ನಾವು ಎಲ್ಲವನ್ನೂ ಸ್ಪಷ್ಟವಾಗಿ ತಿಳಿಸಿದ್ದೇವೆ. ಮುಂದೆ ರಣಜಿ ಟ್ರೋಫಿ, ಭಾರತ ಎ ಕ್ರಿಕೆಟ್ ಸರಣಿ ಸೇರಿದಂತೆ ದೇಶೀಯ ಟೂರ್ನಿಗಳು ಬರಲಿವೆ. ಅದರಲ್ಲಿ ಉತ್ತಮ ರನ್ ಗಳಿಸಲಿ. ಕರುಣ್ ರನ್ನು ನಾವು ಟೆಸ್ಟ್ ತಂಡದಿಂದ ಸಂಪೂರ್ಣವಾಗಿ ಮೂಲೆಗುಂಪು ಮಾಡಿಲ್ಲ. ಮುಂದೆ ದೇಶೀಯ ಟೂರ್ನಿಯಲ್ಲಿ ಆಡಿದಾಗ ಅವರಿಗೆ ಖಂಡಿತಾ ಸ್ಥಾನ ಸಿಗುತ್ತದೆ’ ಎಂದು ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ. ರಾಷ್ಟ್ರೀಯ ತಂಡದಲ್ಲಿ ಆಡುವ ಬಳಗದಲ್ಲಿ ಸ್ಥಾನ ನೀಡದೇ ಅವರು ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಹೇಗೆ ಸಾಧ್ಯ? ಇದನ್ನು ಆಯ್ಕೆಗಾರರೇ ಹೇಳಬೇಕು!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments