Webdunia - Bharat's app for daily news and videos

Install App

ರೋಹಿತ್, ಕೊಹ್ಲಿ ರಾಮಮಂದಿರ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?

Krishnaveni K
ಮಂಗಳವಾರ, 23 ಜನವರಿ 2024 (09:34 IST)
ಮುಂಬೈ: ಅಯೋಧ್ಯೆಯಲ್ಲಿ ನಿನ್ನೆ ನಡೆದಿದ್ದ ಐತಿಹಾಸಿಕ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರನ್ನೂ ಆಹ್ವಾನಿಸಲಾಗಿತ್ತು.

ಆದರೆ ಈ ಇಬ್ಬರೂ ಕ್ರಿಕೆಟಿಗರೂ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ಅಯೋಧ್ಯೆಯಲ್ಲಿ ವಿರಾಟ್ ಕೊಹ್ಲಿಯ ಬೆಂಗಾವಲು ಪಡೆಯ ಕಾರು ಓಡಾಡುತ್ತಿದ್ದುದು ನೋಡಿ ಕೊಹ್ಲಿ ಕಾರ್ಯಕ್ರಮಕ್ಕೆ ಬರುತ್ತಾರೆ ಎಂದೇ ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಇದರ ನಡುವೆಯೇ ಅವರು ಕೌಟುಂಬಿಕ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯುವ ನಿರ್ಧಾರ ಮಾಡಿದ್ದರು. ಬಹುಶಃ ಕೌಟುಂಬಿಕ ಕಾರಣಕ್ಕೇ ಕೊಹ್ಲಿ ರಾಮಮಂದಿರಕ್ಕೂ ಬಂದಿರಲಿಲ್ಲ.

ಇನ್ನು, ರೋಹಿತ್ ಶರ್ಮಾಗೆ ಆಹ್ವಾನ ಸಿಕ್ಕರೂ ಅವರೂ ಕಾರ್ಯಕ್ರಮಕ್ಕೆ ಬಂದಿಲ್ಲ. ಜನವರಿ 25 ರಿಂದ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಸರಣಿಗಾಗಿ ರೋಹಿತ್ ಮುಂಬೈನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ಅವರು ಬಂದಿರಲಿಲ್ಲ ಎನ್ನಲಾಗಿದೆ.

ಈ ಇಬ್ಬರು ಮಾತ್ರವಲ್ಲದೆ, ಧೋನಿಯನ್ನೂ ಆಹ್ವಾನಿಸಲಾಗಿತ್ತಾದರೂ ಅವರೂ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಕ್ರಿಕೆಟಿಗರ ಪೈಕಿ ರವೀಂದ್ರ ಜಡೇಜಾ, ಸಚಿನ್ ತೆಂಡುಲ್ಕರ್, ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್, ಹರ್ಭಜನ್ ಸಿಂಗ್ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments