Webdunia - Bharat's app for daily news and videos

Install App

ಲಾಂಗ್ ಬ್ರೇಕ್ ಬೇಕು ಎಂದಿದ್ದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಲಂಕಾ ಸರಣಿಗೆ ವಾಪಸ್ ಆಗಿದ್ದು ಹೇಗೆ

Krishnaveni K
ಶನಿವಾರ, 20 ಜುಲೈ 2024 (09:17 IST)
ಮುಂಬೈ: ಟಿ20 ವಿಶ್ವಕಪ್ ಗೆಲುವಿನ ಬಳಿಕ ಸುದೀರ್ಘ ಬ್ರೇಕ್ ಬೇಕು ಎಂದಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಹಿರಿಯ ಆಟಗಾರ ವಿರಾಟ್ ಕೊಹ್ಲಿ ದಿಡೀರ್ ಆಗಿ ತಂಡಕ್ಕೆ ವಾಪಸ್ ಆಗಿದ್ದು ಹೇಗೆ ಎಂಬ ಕುತೂಹಲ ಎಲ್ಲರಲ್ಲಿದೆ.

ಇದಕ್ಕೆ ಕಾರಣ ಗೌತಮ್ ಗಂಭೀರ್ ಮಾಡಿದ ಮನವಿ ಎನ್ನಲಾಗುತ್ತಿದೆ. ಟೀಂ ಇಂಡಿಯಾ ಕೋಚ್ ಆಗಿ ನೇಮಕಗೊಂಡ ಬೆನ್ನಲ್ಲೇ ಗಂಭೀರ್ ತಮ್ಮ ಮೊದಲ ಸರಣಿಯಲ್ಲೇ ಹಿರಿಯ ಆಟಗಾರರೂ ಉಪಸ್ಥಿತರಿರಬೇಕೆಂದು ಬಯಸಿದ್ದರು. ಇದಕ್ಕಾಗಿ ಸ್ವತಃ ತಾವೇ ಕೊಹ್ಲಿ ಮತ್ತು ರೋಹಿತ್ ಗೆ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದ್ದರು.

ಇದಲ್ಲದೆ, ಮುಂದಿನ ವರ್ಷ ಆರಂಭದಲ್ಲೇ ಏಕದಿನ ಮಾದರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದ್ದು, ಈ ಟೂರ್ನಿಗೆ ಮೊದಲು ಟೀಂ ಇಂಡಿಯಾಕ್ಕೆ ಕೆಲವೇ ಕೆಲವು ಏಕದಿನ ಪಂದ್ಯಗಳು ಸಿಗುತ್ತಿವೆ. ತಂಡದ ಕಾಂಬಿನೇಷನ್ ಬಗ್ಗೆ ಯೋಜನೆ ರೂಪಿಸಲು ಈ ಹಿರಿಯ ಆಟಗಾರರು ತಂಡದಲ್ಲಿದ್ದರೆ ಸುಲಭವಾಗುತ್ತದೆ ಮತ್ತು ಹಿರಿಯ ಆಟಗಾರರಿಗೂ ಚಾಂಪಿಯನ್ಸ್ ಟ್ರೋಫಿಗೆ ಮೊದಲು ಅಭ್ಯಾಸ ದೊರೆತಂತಾಗುತ್ತದೆ ಎಂದು ಗಂಭೀರ್ ಮನವಿ ಮಾಡಿದ್ದರು ಎನ್ನಲಾಗಿದೆ.

ಇದೇ ಕಾರಣಕ್ಕೆ ಸುದೀರ್ಘ ಬ್ರೇಕ್ ಪಡೆಯಲು ಬಯಸಿದ್ದ ರೋಹಿತ್ ಮತ್ತು ಕೊಹ್ಲಿಯನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಲಾಯಿತು. ಹೀಗಾಗಿ ಈಗ ವಿದೇಶ ಪ್ರವಾಸದಲ್ಲಿರುವ ಎಲ್ಲಾ ಆಟಗಾರರೂ ಏಕದಿನ ಸರಣಿ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಮುಂದಿನ ಸುದ್ದಿ
Show comments