Webdunia - Bharat's app for daily news and videos

Install App

ಶತಕ ಸಿಡಿಸಿದ ಬಳಿಕ ಶುಬ್ಮನ್ ಗಿಲ್ ಟ್ರೇಡ್ ಮಾರ್ಕ್ ಸೆಲೆಬ್ರೇಷನ್ ಮಾಡಿಲ್ಲವೇಕೆ?

Krishnaveni K
ಸೋಮವಾರ, 5 ಫೆಬ್ರವರಿ 2024 (15:06 IST)
ವಿಶಾಖಪಟ್ಟಣಂ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದ ಶುಬ್ಮನ್ ಗಿಲ್ ಎಂದಿನಂತೆ ಸೆಲೆಬ್ರೇಷನ್ ಮಾಡಿರಲಿಲ್ಲ.

ಸಾಮಾನ್ಯವಾಗಿ ಯಾವುದೇ ಫಾರ್ಮ್ಯಾಟ್ ಇರಲಿ, ಶತಕ ಸಿಡಿಸಿದಾಗ ಶುಬ್ಮನ್ ಗಿಲ್ ತಲೆ ಬಾಗಿ ನಮಿಸುತ್ತಾರೆ. ಅವರ ಈ ನಮಸ್ಕರಿಸುವ ಸ್ಟೈಲ್ ಅಭಿಮಾನಿಗಳಿಗೆ ಇಷ್ಟವಾಗಿತ್ತು. ಆದರೆ ಸತತ ವೈಫಲ್ಯಗಳ ನಂತರ ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಬಳಿಕ ಗಿಲ್ ಕಡೆಯಿಂದ ಯಾವುದೇ ಸೆಲೆಬ್ರೇಷನ್‍ ಬಂದಿರಲಿಲ್ಲ.  ಇದಕ್ಕೆ ಕಾರಣವೇನೆಂದು ಅವರು ಪಂದ್ಯದ ನಂತರ ವಿವರಿಸಿದ್ದಾರೆ.

ಸೆಲೆಬ್ರೇಷನ್ ಯಾಕಿರಲಿಲ್ಲ ಎಂದು ಕಾರಣ ಹೇಳಿದ ಗಿಲ್
ಪಂದ್ಯದ ಬಳಿಕ ಕಾಮೆಂಟೇಟರ್ ಗಳ ಜೊತೆ ಮಾತುಕತೆ ವೇಳೆ ಎಂದಿನಂತೆ ಯಾಕೆ ಸೆಲೆಬ್ರೇಷನ್ ಮಾಡಲಿಲ್ಲ ಎಂಬ ಪ್ರಶ್ನೆ ಬಂತು. ಇದಕ್ಕೆ ಉತ್ತರಿಸಿದ ಗಿಲ್, ನಾನು ಶತಕವಷ್ಟೇ ಬಾರಿಸಿದ್ದೆ. ನನ್ನ ಕೆಲಸ ಪೂರ್ತಿಯಾಗಿಲ್ಲ ಎನಿಸಿತು. ಬಹುಶಃ ದ್ವಿಶತಕ ಗಳಿಸಿದ್ದರೆ ಆ ರೀತಿ ಸೆಲೆಬ್ರೇಟ್ ಮಾಡುತ್ತಿದ್ದೆ ಎಂದಿದ್ದಾರೆ.

ದ್ವಿತೀಯ ಇನಿಂಗ್ಸ್ ನಲ್ಲಿ ತಂಡ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್ ಗೆ ಬಂದಿದ್ದ ಗಿಲ್ 104 ರನ್ ಗಳ ಉಪಯುಕ್ತ ಕಾಣಿಕೆ ನೀಡಿದ್ದರು. ಇದರಿಂದಾಗಿ ಭಾರತ ಎದುರಾಳಿಗೆ ಪೈಪೋಟಿಕರ ಗುರಿ ನೀಡಲು ಸಾಧ್ಯವಾಯಿತು.

ಗಾಯದ ಬಗ್ಗೆ ಅಪ್ ಡೇಟ್ ನೀಡಿದ ಗಿಲ್
ಇನ್ನು ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಶುಬ್ಮನ್ ಗಿಲ್ ಕೈ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಆ ಬಗ್ಗೆ ಮಾಹಿತಿ ನೀಡಿರುವ ಅವರು ಇಂಜಕ್ಷನ್ ತಗೊಂಡಿದ್ದೆ. ಸ್ವಲ್ಪ ನೋವಿದೆ. ಆದರೂ ಮೂರು-ನಾಲ್ಕು ದಿನಗಳಲ್ಲಿ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments