ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ತಲೆನೋವೆಂದು ಹೇಳಿದ್ದೇಕೆ?

Webdunia
ಭಾನುವಾರ, 1 ಜುಲೈ 2018 (09:07 IST)
ಡುಬ್ಲಿನ್: ಐರ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದ ಮೇಲೆ ಪತ್ರಿಕಾಗೋಷ್ಠಿಗೆ ಬರುವಾಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಖದಲ್ಲಿ ಖುಷಿಯ ಬದಲು ಚಿಂತೆಯೇ ಜಾಸ್ತಿಯಿತ್ತು.

ಅವರ ಚಿಂತೆಗೆ ಕಾರಣ ತಂಡದ ಆಯ್ಕೆ ಪ್ರಕ್ರಿಯೆ. ಐರ್ಲೆಂಡ್ ವಿರುದ್ಧ ಎರಡೂ ಪಂದ್ಯಗಳಲ್ಲಿ ಬೇರೆ ಬೇರೆ ಆಟಗಾರರನ್ನು ಆಡಿಸಿ ಯಶಸ್ವಿಯಾದ ಬಳಿಕ ಕೊಹ್ಲಿಗೆ ಈಗ ಯಾರನ್ನು ಆಯ್ಕೆ ಮಾಡುವುದು, ಯಾರನ್ನು ಬಿಡುವುದು ಎಂಬ ತಲೆನೋವು ಶುರುವಾಗಿದೆಯಂತೆ.

ಇದನ್ನೇ ಅವರು ಪತ್ರಕರ್ತರ ಎದುರು ಹಂಚಿಕೊಂಡಿದ್ದಾರೆ. ‘ಎಲ್ಲರೂ ಬ್ಯಾಟ್ ನಿಂದ ಉತ್ತಮ ಕೊಡುಗೆ ನೀಡಿದ್ದಾರೆ. ಈಗ ನನಗೆ ಯಾರನ್ನು ಆಯ್ಕೆ ಮಾಡಬೇಕೆಂಬ ಸಿಹಿಯಾದ ತಲೆನೋವು ಶುರುವಾಗಿದೆ. ಇದು ಭಾರತೀಯ ಕ್ರಿಕೆಟ್ ಗೆ ಒಳ್ಳೆಯದೇ. ನಮ್ಮ ಹುಡುಗರು ತಮಗೆ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇದುವೇ ಸಾಕ್ಷಿ’ ಎಂದು ಎರಡನೇ ಟಿ20 ಪಂದ್ಯದ ಯಶಸ್ಸಿನ ಬಳಿಕ ಕೊಹ್ಲಿ ಹೇಳಿಕೊಂಡಿದ್ದಾರೆ.

ಈ ಪಂದ್ಯಕ್ಕೂ ಮೊದಲೇ ಕೊಹ್ಲಿ ತಮ್ಮ ಬೆಂಚ್ ಹುಡುಗರ ಸಾಮರ್ಥ್ಯ ಒರೆಗೆ ಹಚ್ಚುವುದಾಗಿ ಹೇಳಿಕೊಂಡಿದ್ದರು. ಹೀಗಾಗಿ ದ್ವಿತೀಯ ಟಿ20 ಪಂದ್ಯದಲ್ಲಿ ರಾಹುಲ್, ಹೊಸ ಹುಡುಗ ಸಿದ್ಧಾರ್ಥ್ ಕೌಲ್ ಮುಂತಾದವರು ಅವಕಾಶ ಗಿಟ್ಟಿಸಿದ್ದಷ್ಟೇ ಅಲ್ಲ, ಭರ್ಜರಿ ಆಟವಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

IPL 2026: ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಬೆಚ್ಚಿಬಿದ್ದ ಕೆಕೆಆರ್‌: ಪ್ಲೇ ಆಫ್‌ನತ್ತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS KKR, ಇನ್ನೂ ಶುರುವಾಗದ ಪಂದ್ಯಾಟ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments