Webdunia - Bharat's app for daily news and videos

Install App

ವಿಕೆಟ್ ಕೀಪರ್ ಆದಾಗಲೆಲ್ಲಾ ಕೆಎಲ್ ರಾಹುಲ್ ಅದೃಷ್ಟವೂ ಖುಲಾಯಿಸುತ್ತೆ!

Webdunia
ಸೋಮವಾರ, 5 ಡಿಸೆಂಬರ್ 2022 (09:00 IST)
Photo Courtesy: Twitter
ಢಾಕಾ: ಬಾಂಗ್ಲಾದೇಶ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಈ ಪಂದ್ಯದಲ್ಲಿ ಅವರು 70 ಎಸೆತಗಳಿಂದ 73 ರನ್ ಗಳಿಸಿ ತಂಡ ಹೀನಾಯ ಮೊತ್ತಕ್ಕೆ ಆಲೌಟ್ ಆಗುವುದನ್ನು ತಪ್ಪಿಸಿದರು. ಸಾಮಾನ್ಯವಾಗಿ ಆರಂಭಿಕನಾಗಿ ಕಣಕ್ಕಿಳಿಯುವ ರಾಹುಲ್ ಮಧ‍್ಯಮ ಕ್ರಮಾಂಕದಲ್ಲಿ ಆಡಲಿಳಿದಿದ್ದರು.

ಈ ಪಂದ್ಯದಲ್ಲಿ ಅವರು ವಿಕೆಟ್ ಕೀಪರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಈ ಮೊದಲು ರವಿಶಾಸ್ತ್ರಿ-ವಿರಾಟ್ ಕೊಹ್ಲಿ ನಾಯಕತ್ವದ ತಂಡದಲ್ಲಿಯೂ ರಾಹುಲ್ ಏಕದಿನ ಪಂದ್ಯಗಳಲ್ಲಿ ವಿಕೆಟ್ ಕೀಪರ್ ಮತ್ತು ಬ್ಯಾಟಿಗನಾಗಿ ಕರ್ತವ್ಯ ನಿರ್ವಹಿಸಿ ಮಧ‍್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ಆಗೆಲ್ಲಾ ಅವರು ಉತ್ತಮ ರನ್ ಗಳಿಸಿದ್ದರು. ಇದಾದ ಬಳಿಕ ರಿಷಬ್ ಪಂತ್ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಆರಂಭಿಸಿದ ಮೇಲೆ ರಾಹುಲ್ ಕೆಲವೊಮ್ಮೆ ಬೆಂಚ್ ಕಾಯಿಸಿದ್ದೂ ಇದೆ. ಈಗ ಮತ್ತೆ ಅವರಿಗೆ ವಿಕೆಟ್ ಕೀಪರ್ ಮತ್ತು ಮಧ‍್ಯಮ ಕ್ರಮಾಂಕದ ಬ್ಯಾಟಿಗನಾಗಿ ಜವಾಬ್ಧಾರಿ ನೀಡಲಾಗಿದೆ. ಇದರ ಬೆನ್ನಲ್ಲೇ ಅವರು ಮತ್ತೆ ಕ್ಲಿಕ್ ಆಗಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್. ಆದರೆ ಆ ಒಂದು ಕ್ಯಾಚ್ ಡ್ರಾಪ್ ನಿಂದ ಸಿಕ್ಕ ಗೌರವವನ್ನೂ ನೆಲಕ್ಕೆ ಹಾಕಿದರು ಎಂಬುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಲಾರ್ಡ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ: ಡಿಎಲ್‌ಎಸ್‌ ಆಧಾರದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್‌ ವನಿತೆಯರು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

ಮುಂದಿನ ಸುದ್ದಿ
Show comments