ವಿಶ್ವಕಪ್ 2019: ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಸರ್ಜರಿ ಸಾಧ್ಯತೆ

Webdunia
ಮಂಗಳವಾರ, 2 ಜುಲೈ 2019 (09:35 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಮೊನ್ನೆಯ ಸೋಲು ಮತ್ತು ಕಳೆದೆರಡು ಪಂದ್ಯಗಳಿಂದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡುತ್ತಿರುವ ಬೆನ್ನಲ್ಲೇ ಇಂದು ಭಾರತ ಬಾಂಗ್ಲಾದೇಶವನ್ನು ಎದುರಿಸುತ್ತಿದೆ.


ಇಂದಿನ ಪಂದ್ಯ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ಸ್ಥಾನ ಗ್ಯಾರಂಟಿಯಾಗಲಿದೆ. ಆದರೆ ಇದಕ್ಕೂ ಮೊದಲು ಭಾರತ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆಯಿದೆ.

ಆಲ್ ರೌಂಡರ್ ವಿಜಯ್ ಶಂಕರ್ ಗಾಯದ ಕಾರಣದಿಂದ ಹೊರಬಿದ್ದಿರುವುದರಿಂದ ಅನುಭವಿ ದಿನೇಶ್ ಕಾರ್ತಿಕ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಕೆಎಲ್ ರಾಹುಲ್ ಕೂಡಾ ಆರಂಭಿಕರಾಗಿ ದೊಡ್ಡ ಇನಿಂಗ್ಸ್ ಆಡದೇ ಇರುವ ಕಾರಣ ಅವರ ಸ್ಥಾನದಲ್ಲೂ ಬದಲಾವಣೆ ಆದರೆ ಅಚ್ಚರಿಯಿಲ್ಲ. ರಿಷಬ್ ಪಂತ್ ಅಥವಾ ದಿನೇಶ್ ಕಾರ್ತಿಕ್ ಗೆ ಆರಂಭಿಕರ ಸ್ಥಾನ ಸಿಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ಇನ್ನು ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಫಿಟ್ ಆಗುತ್ತಿದ್ದು, ಕಳೆದ ಪಂದ್ಯದಲ್ಲಿ ದಯನೀಯ ವೈಫಲ್ಯ ಕಂಡ ಕುಲದೀಪ್ ಯಾದವ್ ಸ್ಥಾನದಲ್ಲಿ ಆಡಲಿಳಿಯುವ ಸಾಧ್ಯೆತೆಯಿದೆ. ಅತ್ತ ಬಾಂಗ್ಲಾ ಕೂಡಾ ಈ ಕೂಟದಲ್ಲಿ ಅತ್ಯುತ್ತಮ ಆಟವಾಡಿರುವುದರಿಂದ ಭಾರತ ಈ ಪಂದ್ಯವನ್ನು ಹಗುರವಾಗಿ ಕಾಣುವಂತೆಯೇ ಇಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಾ ಡ್ರೈವರಾ... ಶ್ರೇಯಾಂಕ ಪಾಟೀಲ್ ಡ್ಯಾನ್ಸ್: ಸ್ಮೃತಿ ಮಂಧಾನ ರಿಯಾಕ್ಷನ್ ಮಾತ್ರ ಮಿಸ್ ಮಾಡ್ಲೇಬೇಡಿ video

IND vs NZ: ನ್ಯೂಜಿಲೆಂಡ್ ವಿರುದ್ಧ ಇಂದು ಕಣಕ್ಕಿಳಿಯುತ್ತಾರಾ ಸಂಜು ಸ್ಯಾಮ್ಸನ್

WPL 2026: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ವಿರುದ್ಧ ಫೀಲ್ಡಿಂಗ್ ಆಯ್ಕೆ

ಸಂಜು ಸ್ಯಾಮ್ಸನ್ ಈ ಕಾರಣಕ್ಕಾದರೂ ಮತ್ತೆ ಫಾರ್ಮ್ ಗೆ ಬರಬೇಕು

WPL 2026: ಸತತ ಸೋಲಿನ ಬಳಿಕ ಆರ್ ಸಿಬಿ ನೇರವಾಗಿ ಫೈನಲ್ ಗೇರಲು ಏನು ಮಾಡಬೇಕು

ಮುಂದಿನ ಸುದ್ದಿ
Show comments