Webdunia - Bharat's app for daily news and videos

Install App

ವಿಶ್ವಕಪ್ 2019: ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಸರ್ಜರಿ ಸಾಧ್ಯತೆ

Webdunia
ಮಂಗಳವಾರ, 2 ಜುಲೈ 2019 (09:35 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಮೊನ್ನೆಯ ಸೋಲು ಮತ್ತು ಕಳೆದೆರಡು ಪಂದ್ಯಗಳಿಂದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡುತ್ತಿರುವ ಬೆನ್ನಲ್ಲೇ ಇಂದು ಭಾರತ ಬಾಂಗ್ಲಾದೇಶವನ್ನು ಎದುರಿಸುತ್ತಿದೆ.


ಇಂದಿನ ಪಂದ್ಯ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ಸ್ಥಾನ ಗ್ಯಾರಂಟಿಯಾಗಲಿದೆ. ಆದರೆ ಇದಕ್ಕೂ ಮೊದಲು ಭಾರತ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆಯಿದೆ.

ಆಲ್ ರೌಂಡರ್ ವಿಜಯ್ ಶಂಕರ್ ಗಾಯದ ಕಾರಣದಿಂದ ಹೊರಬಿದ್ದಿರುವುದರಿಂದ ಅನುಭವಿ ದಿನೇಶ್ ಕಾರ್ತಿಕ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಕೆಎಲ್ ರಾಹುಲ್ ಕೂಡಾ ಆರಂಭಿಕರಾಗಿ ದೊಡ್ಡ ಇನಿಂಗ್ಸ್ ಆಡದೇ ಇರುವ ಕಾರಣ ಅವರ ಸ್ಥಾನದಲ್ಲೂ ಬದಲಾವಣೆ ಆದರೆ ಅಚ್ಚರಿಯಿಲ್ಲ. ರಿಷಬ್ ಪಂತ್ ಅಥವಾ ದಿನೇಶ್ ಕಾರ್ತಿಕ್ ಗೆ ಆರಂಭಿಕರ ಸ್ಥಾನ ಸಿಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ಇನ್ನು ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಫಿಟ್ ಆಗುತ್ತಿದ್ದು, ಕಳೆದ ಪಂದ್ಯದಲ್ಲಿ ದಯನೀಯ ವೈಫಲ್ಯ ಕಂಡ ಕುಲದೀಪ್ ಯಾದವ್ ಸ್ಥಾನದಲ್ಲಿ ಆಡಲಿಳಿಯುವ ಸಾಧ್ಯೆತೆಯಿದೆ. ಅತ್ತ ಬಾಂಗ್ಲಾ ಕೂಡಾ ಈ ಕೂಟದಲ್ಲಿ ಅತ್ಯುತ್ತಮ ಆಟವಾಡಿರುವುದರಿಂದ ಭಾರತ ಈ ಪಂದ್ಯವನ್ನು ಹಗುರವಾಗಿ ಕಾಣುವಂತೆಯೇ ಇಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments