Webdunia - Bharat's app for daily news and videos

Install App

ವಿಶ್ವಕಪ್ 2019: ಫೈನಲ್ ಗೇರಲು ಹೊರಟ ಟೀಂ ಇಂಡಿಯಾಗೆ ಆರಂಭದಲ್ಲೇ ಭಾರೀ ಆಘಾತ

Webdunia
ಬುಧವಾರ, 10 ಜುಲೈ 2019 (16:04 IST)
ಲಂಡನ್: ನಿನ್ನೆ ಅರ್ಧಕ್ಕೇ ನಿಂತ ಸೆಮಿಫೈನಲ್ ಪಂದ್ಯ ಇಂದು ಮುಂದುವರಿದಿದ್ದು, ಭಾರತ ಸೋಲಿನ ಸುಳಿಗೆ ಸಿಲುಕಿದೆ.


ನಿನ್ನೆ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ 211 ರನ್ ಗಳಿಸಿದ್ದಾಗ ಮಳೆ ಬಂದಿದ್ದರಿಂದ ಪಂದ್ಯ ಅರ್ಧಕ್ಕೇ ಸ್ಥಗಿತಗೊಂಡಿತು. ಮೀಸಲು ದಿನವಾದ ಇಂದು ಪಂದ್ಯ ಆರಂಭವಾಗಿದ್ದರೂ ಭಾರತದ ಪಾಲಿಗೆ ಆಘಾತಕಾರಿಯಾಗಿದೆ. ಇಂದು 50 ಓವರ್ ಗಳ ಕೋಟಾ ಪೂರೈಸಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿತು.

ಈ ಮೊತ್ತವನ್ನು ಭಾರತದ ಬಲಾಢ್ಯ ಬ್ಯಾಟ್ಸ್ ಮನ್ ಗಳು ಸುಲಭವಾಗಿ ಬೆನ್ನತ್ತಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ ತನ್ನ ಸರದಿ ಆರಂಭಿಸಿ ಭಾರತ ಇತ್ತೀಚೆಗಿನ ವರದಿ ಬಂದಾಗ ಪ್ರಮುಖ  3 ವಿಕೆಟ್ ಕಳೆದುಕೊಂಡು ಕೇವಲ 6 ರನ್ ಗಳಿಸಿ ಹೀನಾಯ ಸ್ಥಿತಿಯಲ್ಲಿದೆ.

ಅದರಲ್ಲೂ ಇನ್ ಫಾರ್ಮ್ ಬ್ಯಾಟ್ಸ್ ಮನ್ ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಪೆವಿಲಿಯನ್ ಸೇರಿಕೊಂಡಿರುವುದು ಭಾರತದ ಪಾಲಿಗೆ ದೊಡ್ಡ ಆಘಾತವಾಗಿದೆ. ಹಿಂದೆ ಪಾಕಿಸ್ತಾನ ವಿರುದ್ಧವೂ ಭಾರತ ರನ್ ಚೇಸ್ ಮಾಡುವಾಗ ಇದೇ ಪರಿಸ್ಥಿತಿ ಎದುರಾಗಿತ್ತು. ಆಗ ಭಾರತ ಹೀನಾಯ ಸೋಲುಂಡಿದ್ದನ್ನು ಅಭಿಮಾನಿಗಳು ಮರೆತಿಲ್ಲ. ಈಗಲೂ ಭಾರತ ತಂಡ ಹೆಚ್ಚು ಕಮ್ಮಿ ಅದೇ ಪರಿಸ್ಥಿತಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments