Webdunia - Bharat's app for daily news and videos

Install App

ಡಬ್ಲ್ಯುಪಿಎಲ್ 2024: ಯುಪಿ ವಾರಿಯರ್ಸ್ ವಿರುದ್ಧ ಗೆದ್ದ ಆರ್ ಸಿಬಿಗೆ ಅಂಕಪಟ್ಟಿಯಲ್ಲಿ ಬಡ್ತಿ

Krishnaveni K
ಮಂಗಳವಾರ, 5 ಮಾರ್ಚ್ 2024 (08:40 IST)
ಬೆಂಗಳೂರು: ಡಬ್ಲ್ಯುಪಿಎಲ್ ಟೂರ್ನಿಯಲ್ಲಿ ಯುಪಿ ವಾರಿಯರ್ಸ್ ವಿರುದ್ಧ 23 ರನ್ ಗಳ ಗೆಲುವು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಅಂಕಪಟ್ಟಿಯಲ್ಲೂ ಬಡ್ತಿ ಪಡೆದಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ ಸ್ಮೃತಿ ಮಂಧಾನ ಅಬ್ಬರದ 80 ಮತ್ತು ಎಲ್ಸಿ ಪೆರಿ ಅವರ 58 ರನ್ ಗಳ ಇನಿಂಗ್ಸ್ ನಿಂದಾಗಿ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ಈ ಬೃಹತ್ ಮೊತ್ತ ಬೆನ್ನತ್ತಿದ ಯುಪಿ ವಾರಿಯರ್ಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.

ಕಳೆದ ಎರಡು ಪಂದ್ಯಗಳನ್ನು ಸತತವಾಗಿ ಸೋತಿದ್ದ ಆರ್ ಸಿಬಿಗೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ತಕ್ಕ ಸಮಯದಲ್ಲಿ ಅನುಭವಿಗಳಾದ ಸ್ಮೃತಿ, ಎಲ್ಸಿ ಪೆರಿ ಬ್ಯಾಟಿಂಗ್ ನಲ್ಲಿ ತಂಡಕ್ಕೆ ಆಸರೆಯಾದರೆ ಬೌಲಿಂಗ್ ನಲ್ಲಿ ಸೋಫಿ ಡಿವೈನ್, ಸೋಫಿ ಮೊಲಿನಕ್ಸ್, ಜಾರ್ಜಿಯಾ ವಾರೆಹಾಂ, ಆಶಾ ಶೋಭನಾ ತಲಾ 2 ವಿಕೆಟ್ ಕಬಳಿಸಿ ತಂಡಕ್ಕೆ ಅರ್ಹ ಜಯ ಕೊಡಿಸಿದರು. ಇದರೊಂದಿಗೆ ಆರ್ ಸಿಬಿ ಮೂರನೇ ಸೋಲು ತಪ್ಪಿಸಿಕೊಂಡು ಸಮಾಧಾನದ ನಿಟ್ಟುಸಿರು ಬಿಟ್ಟಿತು.

ಈ ಡಬ್ಲ್ಯುಪಿಎಲ್ ಟೂರ್ನಿಯಲ್ಲಿ ಆರ್ ಸಿಬಿಗೆ ಇದು ಮೂರನೇ ಗೆಲುವಾಗಿದೆ. ಆಡಿದ ಐದು ಪಂದ್ಯಗಳ ಪೈಕಿ ಎರಡು ಸೋಲು 3 ಗೆಲುವು ಕಂಡಿರುವ ಸ್ಮೃತಿ ಮಂಧಾನ ಪಡೆ ಇದೀಗ ಒಟ್ಟು 6 ಅಂಕ ಪಡೆದಿದ್ದು ಮೂರನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments