Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಕುಡುಕ ಸಹಆಟಗಾರನಿಂದಾಗಿ ಸಾವಿನ ದವಡೆಗೆ ತಲುಪಿದ್ದ ಯಜುವೇಂದ್ರ ಚಾಹಲ್!

Webdunia
ಶುಕ್ರವಾರ, 8 ಏಪ್ರಿಲ್ 2022 (11:02 IST)
ಮುಂಬೈ: ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್ ಆಡುವ ಕ್ರಿಕೆಟಿಗ ಯಜುವೇಂದ್ರ ಚಾಹಲ್ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡುತ್ತಿದ್ದಾಗ ನಡೆದ ಆತಂಕಕಾರೀ ಘಟನೆಯೊಂದನ್ನು ಸಂದರ್ಶನವೊಂದರಲ್ಲಿ ಬಿಚ್ಚಿಟ್ಟಿದ್ದಾರೆ.

ರವಿಚಂದ್ರನ್ ಅಶ್ವಿನ್ ಜೊತೆಗೆ ಚಿಟ್ ಚ್ಯಾಟ್ ವೇಳೆ ಚಾಹಲ್ ಭಯಾನಕ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ. 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವಾಗ ನಡೆದಿದ್ದ  ಈಘಟನೆಯನ್ನು ನಾನು ಇದುವರೆಗೆ ಯಾರಿಗೂ ಹೇಳಿಕೊಂಡಿರಲಿಲ್ಲ ಎಂದಿದ್ದಾರೆ.

‘ಬೆಂಗಳೂರಿನಲ್ಲಿ ಪಂದ್ಯವಿತ್ತು. ಆಗ ನಾನು ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದೆ. ಪಂದ್ಯದ ಬಳಿಕ ಪಾರ್ಟಿ ವೇಳೆ ಸಹ ಆಟಗಾರನೊಬ್ಬ ಕುಡಿದ ಮತ್ತಿನಲ್ಲಿ ನನ್ನನ್ನು ಹೋಟೆಲ್ ನ 15 ನೇ ಮಹಡಿಯಿಂದ ನೇತು ಹಾಕಿದ್ದ. ನನಗೆ ತೀರಾ ಭಯವಾಗಿ ತಲೆಸುತ್ತು ಬಂದು ಬೀಳುವವನಿದ್ದೆ. ಆಗ ಉಳಿದ ಆಟಗಾರರು ನನ್ನನ್ನು ರಕ್ಷಿಸಿ ರೂಂಗೆ ಕರೆದೊಯ್ದರು’ ಎಂದು ಚಾಹಲ್ ಹೇಳಿದ್ದಾರೆ. ಆದರೆ ಆ ರೀತಿ ಮಾಡಿದ ಆಟಗಾರನ ಹೆಸರು ಬಹಿರಂಗಪಡಿಸಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments