ಟಿ20 ವಿಶ್ವಕಪ್ ಗೆ ಯುವರಾಜ್ ಸಿಂಗ್ ರಾಯಭಾರಿ

Krishnaveni K
ಶುಕ್ರವಾರ, 26 ಏಪ್ರಿಲ್ 2024 (16:08 IST)
ದುಬೈ: ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ರಾಯಭಾರಿಯಾಗಿ ನೇಮಕವಾಗಿದ್ದಾರೆ.

2007 ರ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಯುವರಾಜ್ ಸಿಂಗ್ ಪ್ರಧಾನ ಪಾತ್ರ ವಹಿಸಿದ್ದರು. ಯವರಾಜ್ ಸಿಂಗ್ ಟಿ20 ವಿಶ್ವಕಪ್ ನಲ್ಲಿ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿದ ಏಕೈಕ ಜಾಗತಿಕ ಕ್ರಿಕೆಟಿಗ. 2007 ರಲ್ಲಿ ಇಂಗ್ಲೆಂಡ್ ವಿರುದ್ಧ ಅವರು ಈ ದಾಖಲೆ ಮಾಡಿದ್ದರು. ಇದನ್ನು ಇಂದಿಗೂ ಯಾರೂ ಅಳಿಸಲಾಗಿಲ್ಲ.

ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್, ಒಲಿಂಪಿಕ್ ಗೋಲ್ಡ್ ಮೆಡಲಿಸ್ಟ್ ಉಸೇನ್ ಬೋಲ್ಟ್ ಕೂಡಾ ಟಿ20 ವಿಶ್ವಕಪ್ ಟೂರ್ನಿಯ ರಾಯಭಾರಿಗಳಾಗಿದ್ದಾರೆ. ಅವರ ಜೊತೆಗೆ ಯುವರಾಜ್ ಸಿಂಗ್ ಗೂ ಈ ಗೌರವ ಸಿಕ್ಕಿರುವುದು ವಿಶೇಷ. ಇದೀಗ ಟಿ20 ವಿಶ್ವಕಪ್ ಟೂರ್ನಿಯ ಪ್ರಚಾರ ಕಾರ್ಯದಲ್ಲಿ ಯುವರಾಜ್ ಸಿಂಗ್ ಸಕ್ರಿಯರಾಗಿ ಭಾಗವಹಿಸಲಿದ್ದಾರೆ.

ಟಿ20 ವಿಶ್ವಕಪ್ ಎಂದರೆ ನನ್ನ ಅಚ್ಚುಮೆಚ್ಚಿನ ಕ್ಷಣಗಳಲ್ಲಿ ಆರು ಎಸೆತಕ್ಕೆ ಆರು ಸಿಕ್ಸರ್ ಸಿಡಿಸಿರುವುದು ಸೇರಿದೆ. ನನಗೆ ಇಂತಹದ್ದೊಂದು ಗೌರವ ಸಿಕ್ಕಿರುವುದಕ್ಕೆ ಅಭಾರಿಯಾಗಿದ್ದೇನೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments