Webdunia - Bharat's app for daily news and videos

Install App

ಇದು ಮಾದ್ಯಮಗಳ ಆಟ: ರಜಪೂತ

Webdunia
ಸೋಮವಾರ, 31 ಡಿಸೆಂಬರ್ 2007 (15:05 IST)
ಭಾರತೀಯ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್‌ ಯುವರಾಜ್ ವರ್ತನೆ ಕುರಿತು ತಾನು ಅಪಸ್ವರ ಎತ್ತಿಲ್ಲ. ಈ ರೀತಿ ಆಸ್ಟ್ರೇಲಿಯದ ಮಾದ್ಯಮಗಳು ತಿರುಚಿ ವರದಿ ಮಾಡುವ ಮೂಲಕ ಯುವರಾಜ್ ಸಿಂಗ್ ಅವರನ್ನು ಗೊಂದಲಕ್ಕೆ ಸಿಲುಕಿಸುವ ಪ್ರಯತ್ನವನ್ನು ಅವುಗಳು ಮಾಡುತ್ತಿವೆ ಎಂದು ಟೀಮ್ ಇಂಡಿಯಾದ ಸಹಾಯಕ ಕೋಚ್ ಲಾಲ್ ಚಂದ್ ರಜಪೂತ್ ಹೇಳಿದ್ದಾರೆ.

ಮೆಲ್ಬರ್ನ್ ಮೂಲದ "ದಿ ಏಜ್" ದಿನ ಪತ್ರಿಕೆಯು ಯುವರಾಜ್ ಸಿಂಗ್ ಅವರ ವರ್ತನೆಗೆ ತಂಡದಲ್ಲಿನ ಇತರ ಕ್ರಿಕೆಟರುಗಳಿಗೆ ಬೇಸರ ತರಿಸಿದ್ದು, ಯುವರಾಜ್ ಸಿಂಗ್‌ರೊಂದಿಗೆ ಈ ಕುರಿತು ಚರ್ಚಿಸಲಾಗುವುದು ಎಂದು ರಜಪೂತ್ ಹೇಳಿದ್ದಾರೆ ಎಂದು ವರದಿ ಮಾಡಿತ್ತು.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಪತ್ರಿಕೆ ಉದ್ದೇಶ ಪೂರ್ವಕವಾಗಿ ನನ್ನ ಹೇಳಿಕೆಯನ್ನು ತಿರುಚಿ ಬರೆದಿದೆ. ಮಾದ್ಯಮ ವ್ಯವಸ್ಥಾಪಕರ ಉಪಸ್ಥಿತಿಯಲ್ಲಿ ಪತ್ರಿಕಾಗೋಷ್ಟಿ ಆಯೋಜಿಸಲಾಗಿತ್ತು. ಆ ಸಮಯದಲ್ಲಿ ಈ ವಿಚಾರ ಚರ್ಚೆಗೆ ಬಂದೇ ಇಲ್ಲ ಮತ್ತು ಈ ರೀತಿ ಹೇಳಿಕೆಯನ್ನು ನೀಡಿಲ್ಲ ಎಂದು ಹೇಳಿದರು.

ಯುವರಾಜ್ ತಂಡದ ಅತ್ಯುತ್ತಮ ಕ್ಷೇತ್ರ ರಕ್ಷಕ ಅವರ ಸಾಮರ್ಥ್ಯದಲ್ಲಿ ನಂಬಿಕೆ ಇದೆ. ಈ ಕುರಿತು ಸಂಶಯವೇ ಬೇಡ ಎಂದು ರಜಪೂತ್ ಹೇಳಿದ್ದರು.

ಆಸ್ಟ್ರೇಲಿಯದ ಮಾದ್ಯಮವು ಪ್ರವಾಸಕ್ಕೆ ಮುನ್ನ ಮಾನಸಿಕವಾಗಿ ನಮ್ಮ ಮೇಲೆ ದಾಳಿ ಮಾಡುವ ತಂತ್ರವನ್ನು ಅನುಸರಿಸುತ್ತಿದ್ದು, ಪ್ರತಿ ಬಾರಿ ನಮ್ಮ ಹೇಳಿಕೆಯನ್ನು ತಿರುಚಿ ಬರೆಯುವ ಪ್ರಯತ್ನ ಮಾಡುತ್ತಿದೆ ಎಂದು ರಜಪೂತ ಆಪಾದಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments