Webdunia - Bharat's app for daily news and videos

Install App

ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಕೇರಳ ಎಕ್ಸ್‌ಪ್ರೆಸ್‌ಗೆ ಅಜೀವ ನಿಷೇಧ

Webdunia
ಶುಕ್ರವಾರ, 13 ಸೆಪ್ಟಂಬರ್ 2013 (17:37 IST)
PTI
ಕ್ರಿಕೆಟ್ ಜಗತ್ತನ್ನೆ ಬೆಚ್ಚಿಬೀಳಿಸಿದ್ದ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಭಾರತೀಯ ಕ್ರಿಕೆಟಿಗ ಶ್ರೀಶಾಂತ್ ಸೇರಿದಂತೆ ನಾಲ್ವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಜೀವ ನಿಷೇಧ ಹೇರಿದೆ.

ಇಂದು ನಡೆದ ಬಿಸಿಸಿಐ ಸಮನ್ವಯ ಸಮಿತಿ ಸಭೆಯಲ್ಲಿ ಕಳಂಕಿತ ರಾಜಸ್ತಾನ ರಾಯಲ್ಸ್ ತಂಡದ ಆಟಗಾರರಾದ ಶ್ರೀಶಾಂತ್, ಅಜಿತ್ ಚಾಂಡೀಲಾ, ಅಂಕಿತ್ ಚೌವ್ಹಾಣ್ ಹಾಗೂ ಅಮಿತ್ ಸಿಂಗ್ ಅವರ ವಿರುದ್ಧ ಆಜೀವ ನಿಷೇಧ ಹೇರುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಳೆದ ಐಪಿಎಲ್-7ನಲ್ಲಿ ಈ ನಾಲ್ವರ ಆಟಾಗರರ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಸಿಸಿಐ ಆಜೀವ ನಿಷೇಧ ಆದೇಶ ಹೊರಡಿಸಿದೆ. ಐಪಿಎಲ್ ಸ್ಪಾಟ್‌ಫಿಕ್ಸಿಂಗ್ ಪ್ರಕರಣ ಸಂಬಂಧ ತನಿಖೆಗೆ ಬಿಸಿಸಿಐ ರಚಿಸಿದ್ದ ಸಮಿತಿ ತನ್ನ ತನಿಖೆಯನ್ನು ಪೂರ್ಣಗೊಳಿಸಿ ಇಂದು ವರದಿ ನೀಡಿದ್ದು, ಕಳಂಕಿತ ನಾಲ್ವರು ಆಟಗಾರರು ಕಳ್ಳಾಟದಲ್ಲಿ ಭಾಗಿಯಾಗಿದ್ದು ನಿಜ ಎಂದು ವರದಿ ಹೇಳಿದೆ.

ಅಲ್ಲದೆ ಸ್ವತಃ ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥ ರವಿ ಸವಾನಿ ಅವರು ನಡೆಸಿದ್ದ ಪ್ರತ್ಯೇಕ ತನಿಖೆಯಲ್ಲಿಯೂ ಇಬ್ಬರು ಆಟಗಾರರು ತಪ್ಪೆಸಗಿರುವುದು ಸಾಬೀತಾಗಿದೆ. ಶ್ರೀಶಾಂತ್ ಮತ್ತು ಅಜಿತ್ ಚಾಂಡೀಲಾ ಮತ್ತು ಅಂಕಿತ್ ಚೌವ್ಹಾಣ್ ಅವರು ಹಣ ಪಡೆದು ಕಳ್ಳಾಟದಲ್ಲಿ ಪಾಲ್ಗೊಂಡಿದ್ದರು ಎಂದು ತನಿಖೆಯಿಂದಾಗಿ ತಿಳಿದುಬಂದಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments