Webdunia - Bharat's app for daily news and videos

Install App

ಕ್ರಿಕೆಟ್ ದೇವರನ್ನೇ ಗೊತ್ತಿಲ್ಲದ ವಿದೇಶಿ ಪತ್ರಕರ್ತರು

Webdunia
ಸೋಮವಾರ, 31 ಅಕ್ಟೋಬರ್ 2011 (11:04 IST)
ಭಾನುವಾರ ಭಾರತದ ಪ್ರಪ್ರಥಮ ಫಾರ್ಮುಲಾ ಒನ್ ರೇಸ್‌ಗೆ ಅದ್ದೂರಿ ಆರಂಭ ದೊರಕಿತ್ತು. ಆದರೆ ರೇಸ್‌ಗೆ ಬಾವುಟ ತೋರಿಸಿ ಚಾಲನೆ ನೀಡಿದ್ದ ಕ್ರಿಕೆಟ್ ದೇವರಾದ ಸಚಿನ್ ತೆಂಡೂಲ್ಕರ್ ಅವರನ್ನು ಕೆಲವೊಂದು ವಿದೇಶಿ ಪತ್ರಕರ್ತರಿಗೆ ಪರಿಚಯವಿಲ್ಲದಿರುವುದು ಅಚ್ಚರಿಗೆ ಕಾರಣವಾಗಿತ್ತು.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಬುದ್ಧ ಇಂಟರ್‌ನ್ಯಾಷನಲ್ ಸರ್ಕ್ಯೂಟ್ ಭಾರಿ ಅಭಿಮಾನಿಗಳಿಂದ ತುಂಬಿ ತುಳುಕುತ್ತಿತ್ತು. ಈ ಸಂದರ್ಭದಲ್ಲಿ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿಯಾದ ಸಚಿನ್ ತೆಂಡೂಲ್ಕರ್ ತಮ್ಮ ಫ್ಯಾಮಿಲಿ ಜತೆ ಆಗಮಿಸಿದ್ದರು.

ಸಚಿನ್ ಆಗಮನವಾಗುತ್ತಿದ್ದಂತೆಯೇ ಭಾರತೀಯ ಪತ್ರಕರ್ತರೆಲ್ಲರೂ ನಾ ಮುಂದು ತಾ ಮುಂದು ಎಂಬಂತೆ ಸಚಿನ್ ಫೋಟೊ ಕ್ಲಿಕ್ಕಿಸಲು ದೌಡಾಯಿಸಿದ್ದರು. ಇದನ್ನು ಕಂಡ ಸ್ಪೇನ್ ದೇಶದ ವರದಿಗಾರನೊಬ್ಬ ಭಾರತೀಯ ಪತ್ರಕರ್ತನಲ್ಲಿ, ಆತ ಯಾರು...? ಯಾಕೆ ಮಾಧ್ಯಮದವರೆಲ್ಲ ಆತನ ಅತ್ತ ಓಡುತ್ತಿದ್ದಾರೆ..? ಅವರೇನಾದರೂ ಶ್ರೀಮಂತ ವ್ಯಕ್ತಿಯೇ..? ಎಂದು ಕೇಳಿರುವುದು ವಿಪರ್ಯಾಸಕ್ಕೆ ಕಾರಣವಾಗಿದೆ.

ಆದರೆ ಸ್ಪೇನ್ ಪತ್ರಕರ್ತನ ಪ್ರಶ್ನೆಗೆ ಉತ್ತರಿಸಿದ್ದ ಭಾರತೀಯ ವರದಿಗಾರ, ಆತ 'ಭಾರತೀಯ ಕ್ರಿಕೆಟ್‌ನ ದೇವರು' ಎಂದು ಉತ್ತರಿಸಿದ ಪ್ರಸಂಗ ನಡೆದಿದೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments