Webdunia - Bharat's app for daily news and videos

Install App

ಚಾಂಡಿಲ್‌ಗೆ ದಾವೂದ್ ನೇರ ಸಂಪರ್ಕ:ಪೊಲೀಸ್

Webdunia
ಮಂಗಳವಾರ, 18 ಜೂನ್ 2013 (13:27 IST)
PTI
ಅಮಾನತುಗೊಂಡಿರುವ ರಾಜಸ್ಥಾನ್‌ ರಾಯಲ್ಸ್‌ ಕ್ರಿಕೆಟಿಗ ಅಜಿತ್‌ ಚಾಂಡಿಲ ಅವರನ್ನು ದಿಲ್ಲಿ ನ್ಯಾಯಾಲಯ 3 ದಿನಗಳ ಕಾಲ ಪೊಲೀಸ್‌ ವಶಕ್ಕೊಪ್ಪಿಸಿದೆ. ಚಾಂಡಿಲ ವಿಚಾರಣೆ ಮೋಕಾ ಕಾಯ್ದೆಯಡಿ ನಡೆಯಲಿದೆ.

ಚಾಂಡಿಲ ಅವರೇ ಇಡೀ ಪ್ರಕರಣದ ಮುಖ್ಯ ಸೂತ್ರಧಾರ. ಅವರಿಗೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಅವರ ನೇರ ಸಂಬಂಧವಿದೆ, ದಾವೂದ್‌ ಗುಂಪಿನ ಕೊಂಡಿಯಂತೆ ಅವರು ಕೆಲಸ ಮಾಡುತ್ತಿದ್ದಾರೆ ಎಂದು ವಿಚಾರಣೆ ವೇಳೆ ಪೊಲೀಸರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಚಾಂಡಿಲ ಅವರನ್ನು ಪೊಲೀಸ್‌ ವಶಕ್ಕೊಪ್ಪಿಸಿತು.

ಸೋಮವಾರವೂ ತಮ್ಮ ಎಂದಿನ ವಾದ ಮುಂದುವರಿಸಿದ ಪೊಲೀಸರು, ಚಾಂಡಿಲ ಅವರು ಆಟಗಾರರು-ಬುಕ್ಕಿಗಳ ನಡುವೆ ಕೊಂಡಿಯಂತೆ ಕೆಲಸ ಮಾಡಿದರು, ಬುಕ್ಕಿಗಳ ನಿರ್ದೇಶನದಂತೆ ಕೆಲಸ ಮಾಡಲು ಭಾರೀ ಹಣವನ್ನೂ ಪಡೆದಿದ್ದಾರೆ ಎಂದು ಬಲವಾಗಿ ಹೇಳಿದರು.

ನಾಲ್ವರು ಬುಕ್ಕಿಗಳ ವಿಚಾರಣೆ

ಬುಕ್ಕಿಗಳಾದ ರಮೇಶ್‌ ವ್ಯಾಸ್‌, ಸುನಿಲ್‌ ಭಾಟಿಯ, ಫಿರೋಜ್‌ ಅನ್ಸಾರಿ ಅವರು, ಬುಕ್ಕಿಗಳು ಮತ್ತು ಆಟಗಾರರ ನಡುವಿನ ಹೊಂದಾಣಿಕೆಯ ಬಗ್ಗೆ ಹೆಚ್ಚು ಮಾಹಿತಿ ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ವಿವರಣೆ ನೀಡಿದರು. ರಮೇಶ್‌ ವ್ಯಾಸ್‌ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ.

ಮೇ 16ರಂದು ದಿಲ್ಲಿ ಪೊಲೀಸರು ಶ್ರೀಶಾಂತ್‌, ಅಂಕಿತ್‌ ಚೌಹಾಣ್‌, ಅಜಿತ್‌ ಚಾಂಡಿಲರನ್ನು ಬಂಧಿಸಿ ಮೋಕಾ ಕಾಯ್ದೆ ಹೇರಿದ್ದರು. ಕಳೆದ ವಾರ ಶ್ರೀಶಾಂತ್‌ ಮತ್ತು ಅಂಕಿತ್‌ಗೆ ನ್ಯಾಯಾಲಯ ಜಾಮೀನು ನೀಡಿತ್ತು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments